News Karnataka Kannada
Thursday, May 09 2024
ಚಾಮರಾಜನಗರ

ಇಂಡಿಗನತ್ತದಲ್ಲಿ ಮರು ಮತದಾನ : ಚುನಾವಣಾ ಆಯೋಗ ಘೋಷಣೆ

ಶುಕ್ರವಾರ ಮತದಾನ ಬಹಿಷ್ಕಾರ ನಡೆಸಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಮತಗಟ್ಟೆ ಧ್ವಂಸ ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಮರು ಚುನಾವಣೆ ಮಾಡುವುದಾಗಿ ಘೋಷಿಸಿದೆ.
Photo Credit : NewsKarnataka

ಚಾಮರಾಜನಗರ : ಶುಕ್ರವಾರ ಮತದಾನ ಬಹಿಷ್ಕಾರ ನಡೆಸಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಮತಗಟ್ಟೆ ಧ್ವಂಸ ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಮರು ಚುನಾವಣೆ ಮಾಡುವುದಾಗಿ ಘೋಷಿಸಿದೆ.

ಏ.29 ರ ಸೋಮವಾರದಂದು ಬೆಳಗ್ಗೆ 7 ರಿಂದ ಸಂಜೆವರೆಗೆ 146 ರ ಮತಗಟ್ಟೆಯಲ್ಲಿ ಮರು ಚುನಾವಣೆ ನಡೆಸಲಾಗುತ್ತದೆ ಎಂದು ಚುನಾವಣಾ ಆಯೋಗ X ನಲ್ಲಿ ಮಾಹಿತಿ ಹಂಚಿಕೊಂಡಿದೆ.

ಶುಕ್ರವಾರದಂದು ಹನೂರು ತಾಲೂಕಿನ ಇಂಡಿಗನತ್ತದಲ್ಲಿ ಮತದಾನಕ್ಕೆ ಅಡ್ಡಿಪಡಿಸಿ, ಮತಯಂತ್ರಗಳನ್ನು ಕೆಲವರು ಹಾನಿ ಮಾಡಿದ್ದರು. ಈ ಸಂಬಂಧ, ಹನೂರು ತಹಶಿಲ್ದಾರ್ ಹಾಗೂ ಚುನಾವಣಾ ಅಧಿಕಾರಿ ಪ್ರತ್ಯೇಕ ದೂರು ಕೊಟ್ಟಿದ್ದರು.

ಮಲೆಮಹದೇಶ್ವರ ಬೆಟ್ಟ ಪೊಲೀಸರು 25 ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದಾರೆ. ಹಲವರು ಗ್ರಾಮ ತೊರೆದು ಪರಾರಿಯಾಗಿದ್ದಾರೆ‌. ಮೆಂದಾರೆ ಗ್ರಾಮಕ್ಕೆ ಪೊಲೀಸರು ತೆರಳಿ ಮತದಾನ ಮಾಡುವಂತೆ ಇಂದು ಧೈರ್ಯ ತುಂಬಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು