ಚಾಮರಾಜನಗರ : ಶುಕ್ರವಾರ ಮತದಾನ ಬಹಿಷ್ಕಾರ ನಡೆಸಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಮತಗಟ್ಟೆ ಧ್ವಂಸ ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಮರು ಚುನಾವಣೆ ಮಾಡುವುದಾಗಿ ಘೋಷಿಸಿದೆ.
ಏ.29 ರ ಸೋಮವಾರದಂದು ಬೆಳಗ್ಗೆ 7 ರಿಂದ ಸಂಜೆವರೆಗೆ 146 ರ ಮತಗಟ್ಟೆಯಲ್ಲಿ ಮರು ಚುನಾವಣೆ ನಡೆಸಲಾಗುತ್ತದೆ ಎಂದು ಚುನಾವಣಾ ಆಯೋಗ X ನಲ್ಲಿ ಮಾಹಿತಿ ಹಂಚಿಕೊಂಡಿದೆ.
ಶುಕ್ರವಾರದಂದು ಹನೂರು ತಾಲೂಕಿನ ಇಂಡಿಗನತ್ತದಲ್ಲಿ ಮತದಾನಕ್ಕೆ ಅಡ್ಡಿಪಡಿಸಿ, ಮತಯಂತ್ರಗಳನ್ನು ಕೆಲವರು ಹಾನಿ ಮಾಡಿದ್ದರು. ಈ ಸಂಬಂಧ, ಹನೂರು ತಹಶಿಲ್ದಾರ್ ಹಾಗೂ ಚುನಾವಣಾ ಅಧಿಕಾರಿ ಪ್ರತ್ಯೇಕ ದೂರು ಕೊಟ್ಟಿದ್ದರು.
ಮಲೆಮಹದೇಶ್ವರ ಬೆಟ್ಟ ಪೊಲೀಸರು 25 ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದಾರೆ. ಹಲವರು ಗ್ರಾಮ ತೊರೆದು ಪರಾರಿಯಾಗಿದ್ದಾರೆ. ಮೆಂದಾರೆ ಗ್ರಾಮಕ್ಕೆ ಪೊಲೀಸರು ತೆರಳಿ ಮತದಾನ ಮಾಡುವಂತೆ ಇಂದು ಧೈರ್ಯ ತುಂಬಿದ್ದಾರೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…
ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ ಮಕ್ಕಳ ಮೇಲೆ ಬೀದಿ ನಾಯಿಗಳ ಗ್ಯಾಂಗ್ ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…
ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…
ಸ್ಯಾಂಡಲ್ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…