News Karnataka Kannada
Monday, April 29 2024
ಚಾಮರಾಜನಗರ

ಸಕಾಲದಲ್ಲಿ ಸಾರ್ವಜನಿಕ ಸಮಸ್ಯೆ ಬಗೆಹರಿಸಿ: ಕೆ.ಮಹದೇವ್

Piriya (1)
Photo Credit : By Author

ಪಿರಿಯಾಪಟ್ಟಣ: ಸಾರ್ವಜನಿಕ ಸಮಸ್ಯೆಗಳನ್ನು ಅಧಿಕಾರಿಗಳು ಸಕಾಲಕ್ಕೆ ಪರಿಹರಿಸುವ ಪ್ರವೃತ್ತಿ ಬಳಸಿಕೊಳ್ಳುವಂತೆ ಶಾಸಕ ಕೆ.ಮಹದೇವ್ ತಿಳಿಸಿದರು.

ತಾಲೂಕಿನ ಕಿತ್ತೂರು ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಶಾಸಕನಾದ ಬಳಿಕ ಸರ್ಕಾರದ ಹಲವು ಯೋಜನೆಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ದೊರಕಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಸಾರ್ವಜನಿಕರು ತಾಲ್ಲೂಕಿನ ಯಾವುದೇ ಇಲಾಖೆಗಳಿಗೆ ಅರ್ಜಿ ಕೊಟ್ಟು ನಿಮ್ಮ ಸಮಸ್ಯೆ ಬಗೆಹರಿಯದಿದ್ದರೆ ಅಥವಾ ಅಧಿಕಾರಗಳು ಸ್ಪಂದಿಸದ ವೇಳೆ ನೇರವಾಗಿ ನನಗೆ ಕರೆ ಮಾಡಿ ಎಂದರು.

ತಹಸೀಲ್ದಾರ್ ಎಂ.ಎಸ್ ಯದುಗಿರೀಶ್ ಅವರು ಮಾತನಾಡಿ ಸಾರ್ವಜನಿಕ ಕೆಲಸಗಳಿಗೆ ಕಚೇರಿಗಳಿಗೆ ನಿತ್ಯ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಮೂಲಕ ಸವಲತ್ತುಗಳನ್ನು ಮನೆ ಬಾಗಿಲಿಗೆ ನೀಡುವ ಉದ್ದೇಶ ಹೊಂದಿದ್ದು ಪ್ರತಿಯೊಬ್ಬರೂ ತಮಗೆ ವಹಿಸಿದ ಕರ್ತವ್ಯವನ್ನು ನಿರ್ಲಕ್ಷಿಸದೆ ಸಕಾಲಕ್ಕೆ ಸಾರ್ವಜನಿಕರಿಗೆ ತಲುಪುವಂತೆ ನೋಡಿಕೊಳ್ಳಲು ತಿಳಿಸಿದರು.

ತಾಲೂಕು ಪಂಚಾಯತಿ ಇಒ ಸಿ.ಆರ್.ಕೃಷ್ಣಕುಮಾರ್ ಅವರು ಮಾತನಾಡಿ ಪಂಚಾಯಿತಿಯಲ್ಲಿ ರೈತರು ಸೇರಿದಂತೆ ಪ್ರತಿಯೊಬ್ಬರಿಗೂ ಅನುಕಲವಾಗುವ ಯೋಜನೆಗಳು ಸಾಕಷ್ಟಿದ್ದು ಅವುಗಳನ್ನು ಪ್ರತಿಯೊಬ್ಬರು ಸದ್ಬಳಕೆ ಮಾಡಿಕೊಳ್ಳಬೇಕು ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಇಲಾಖೆ ಮಾಹಿತಿಗಳು ತಲುಪುವಂತಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಪಿಂಚಣಿ ಯೋಜನೆಯ ಆದೇಶ ಪತ್ರ ಸೇರಿದಂತೆ ವಿವಿಧ ಯೋಜನೆಗಳ ಮಂಜೂರಾತಿ ಪತ್ರಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಿದರು.

ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಿದ ಆರೋಗ್ಯ ಶಿಬಿರದಲ್ಲಿ ಸುಮಾರು ನೂರಕ್ಕೂ ಹೆಚ್ಚು ಮಂದಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು, ಒಂದೆರಡು ದಿನದಲ್ಲಿ ಸಾರ್ವಜನಿಕ ಸಮಸ್ಯೆ ಬಗೆಹರಿಸಬೇಕು ಎಂದು ಕಿತ್ತೂರು ಗ್ರಾ.ಪಂ ಪಿಡಿಓ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳನ್ನು ಶಾಸಕರು ತರಾಟೆ ತೆಗೆದುಕೊಂಡು ಖಡಕ್ ಸೂಚನೆ ನೀಡಿದರು.

ಈ ಸಂದರ್ಭ ಕಿತ್ತೂರು ಗ್ರಾ.ಪಂ ಅಧ್ಯಕ್ಷೆ ನಳಿನಿ, ಉಪಾಧ್ಯಕ್ಷೆ ವೀಣಾ, ಜಿ.ಪಂ ಮಾಜಿ ಸದಸ್ಯ

ಕೆ ಎಸ್ ಮಂಜುನಾಥ್, ಜೆಡಿಎಸ್ ತಾಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಸಹಾಯಕ ಕೃಷಿ ನಿರ್ದೇಶಕ ಪ್ರಸಾದ್, ತಾಲ್ಲೂಕು ಅರೋಗ್ಯಾಧಿಕಾರಿ ಡಾ. ಶರತ್ ಬಾಬು, ಬಿಇಒ ಬಸವರಾಜು, ಲೋಕೋಪಯೋಗಿ ಇಲಾಖೆ ಎಇಇ ವೆಂಕಟೇಶ್, ಸಾರಿಗೆ ಇಲಾಖೆ ವ್ಯವಸ್ಥಾಪಕ ದರ್ಶನ್ ರಾಮಚಂದ್, ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಸಿಡಿಪಿಒ ಮಮತಾ, ಉಪತಹಸೀಲ್ದಾರ್ ಶಶಿಧರ್, ಕಂದಾಯ ನಿರೀಕ್ಷಕ ಆನಂದ್, ಮುಖಂಡರಾದ ಗಗನ್, ದಿನೇಶ್, ಸತೀಶ್ ಹಾಗು ವಿವಿಧ ಇಲಾಖೆಯ ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳು ಗ್ರಾಮಲೆಕ್ಕಾಧಿಕಾರಿಗಳು ಇದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು