ಗುಂಡ್ಲುಪೇಟೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವ ತಾಲೂಕಿನ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ದಾಖಲೆ ಇಲ್ಲದೇ ಸಾಗಿಸಲಾಗುತ್ತಿದ್ದ 3.04 ಲಕ್ಷ ರೂ. ನಗದನ್ನು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಮದ್ದೂರು ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಪ್ರತಿದಿನ ತಾಲೂಕಿನಾದ್ಯಂತ ಹದ್ದಿನ ಕಣ್ಣಿಟ್ಟು ಕಾಯಲಾಗುತ್ತಿದ್ದು, ಅದರಂತೆ ತಾಲೂಕಿನ ಕೇರಳ ಹಾಗೂ ತಮಿಳುನಾಡು ಗಡಿಗಳಲ್ಲಿ ಅಲರ್ಟ್ ಆಗಿದ್ದಾರೆ.
ಈ ನಡುವೆ ಮದ್ದೂರು ಚೆಕ್ ಪೋಸ್ಟ್ ನಲ್ಲಿ ವಾಹನಗಳ ತಪಾಸಣೆ ಮಾಡುತ್ತಿರುವಾಗ ಕೇರಳದಿಂದ ದಾಖಲಾತಿ ಇಲ್ಲದೆ ಹಣ ಸಾಗಾಟ ಮಾಡುತ್ತಿದ್ದ ಈಚರ್ ವಾಹನ ಚಾಲಕ ಹ್ಯಾರಿಸ್ ಅವರಿಂದ ನಗದು 97,000/-, ಪಿಕಪ್ ಚಾಲಕ ಜಂಶೀರ್ ಅವರಿಂದ ನಗದು ಹಣ ರೂ 1.17 ಲಕ್ಷ ಮತ್ತು ಕಾರಿನಲ್ಲಿ ಬರುತ್ತಿದ್ದ ಜೋಶ್ ಕೈನಾಂಡಿ ಅವರಿಂದ ನಗದು ಹಣ ರೂ 1ಲಕ್ಷ ರೂ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆರಕ್ಷಕ ನಿರೀಕ್ಷಕ ಪರಶಿವಮೂರ್ತಿ ಅವರು ತಿಳಿಸಿದ್ದಾರೆ.