News Karnataka Kannada
Tuesday, April 30 2024
ಚಾಮರಾಜನಗರ

ಸರಗೂರು: ಕೊತ್ತೇಗಾಲ ಗ್ರಾಮದಲ್ಲಿ ಕಾಡುಪ್ರಾಣಿಗಳ ಹಾವಳಿ

Saragur: Wild animals in Kottegala village
Photo Credit :

ಸರಗೂರು: ಕಾಡಾನೆಗಳು ಮತ್ತು ಹಂದಿಗಳು ದಾಳಿ ನಡೆಸಿ ಮೆಕ್ಕೆಜೋಳ  ಬೆಳೆ ನಾಶ ಮಾಡಿರುವ ಘಟನೆ ತಾಲ್ಲೂಕಿನ ಕೊತ್ತೆಗಾಲ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ರೈತರು ವಿವಿಧ ಬೆಳೆಗಳನ್ನು ಬೆಳೆದಿದ್ದು,  ಈಗ ಮಳೆ ಆರಂಭವಾಗಿರುವುದರಿಂದ ಪಕ್ಕದ ನಾಗರಹೊಳೆ ಅರಣ್ಯದಿಂದ ಕಾಡಾನೆಗಳು ಮತ್ತು ಕಾಡು ಹಂದಿಗಳು ಸೇರಿದಂತೆ ವಿವಿಧ ವನ್ಯ ಪ್ರಾಣಿಗಳು ನೇರವಾಗಿ ರೈತರ ಜಮೀನುಗಳಿಗೆ ನುಗ್ಗುತ್ತಿವೆ.

ಈ ನಡುವ ಗ್ರಾಮದ ರೈತರಾದ ಲಿಂಗರಾಜು ಸುಮಾರು 6 ಎಕರೆ ಜಮೀನಿನ ಪೈಕಿ ಒಂದು ಎಕರೆ ಪ್ರದೇಶದಲ್ಲಿ ಮೆಕ್ಕೆ ಜೋಳದ ಬೀಜ ತಂದು ಬೆಳೆ ಬೆಳೆದಿದ್ದರು. ಆದರೆ ಕಾಡಾನೆಗಳು ಹಾಗೂ ಹಂದಿಗಳು ಜಮೀನಿಗೆ ದಾಳಿ ಮಾಡಿದ್ದು ಬೆಳೆ  ನಾಶವಾಗಿದೆ, ಇದರಿಂದಾಗಿ ಅವರಿಗೆ  ಸುಮಾರು 30 ಸಾವಿರಕ್ಕೂ ಹೆಚ್ಚು ರೂ ನಷ್ಟ ಉಂಟಾಗಿದೆ.  ಈ ಬಗ್ಗೆ ಅಳಲು ತೋಡಿಕೊಂಡಿರುವ ಅವರು, ಈ ಸಂಬಂಧ ಪರಿಹಾರಕ್ಕಾಗಿ  ಸರಗೂರು ಅರಣ್ಯ ಇಲಾಖೆಗೆ ದೂರು ನೀಡಿದ್ದು, ಡಿ ಆರ್ ಎಫ್ ಓ ಲಿಂಗರಾಜು ಹಾಗೂ ಸಿಬ್ಬಂದಿ ವರ್ಗ  ಸ್ಥಳ ತೆರಳಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು