ಚಾಮರಾಜನಗರ

ಸರಗೂರು: ಕೊತ್ತೇಗಾಲ ಗ್ರಾಮದಲ್ಲಿ ಕಾಡುಪ್ರಾಣಿಗಳ ಹಾವಳಿ

ಸರಗೂರು: ಕಾಡಾನೆಗಳು ಮತ್ತು ಹಂದಿಗಳು ದಾಳಿ ನಡೆಸಿ ಮೆಕ್ಕೆಜೋಳ  ಬೆಳೆ ನಾಶ ಮಾಡಿರುವ ಘಟನೆ ತಾಲ್ಲೂಕಿನ ಕೊತ್ತೆಗಾಲ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ರೈತರು ವಿವಿಧ ಬೆಳೆಗಳನ್ನು ಬೆಳೆದಿದ್ದು,  ಈಗ ಮಳೆ ಆರಂಭವಾಗಿರುವುದರಿಂದ ಪಕ್ಕದ ನಾಗರಹೊಳೆ ಅರಣ್ಯದಿಂದ ಕಾಡಾನೆಗಳು ಮತ್ತು ಕಾಡು ಹಂದಿಗಳು ಸೇರಿದಂತೆ ವಿವಿಧ ವನ್ಯ ಪ್ರಾಣಿಗಳು ನೇರವಾಗಿ ರೈತರ ಜಮೀನುಗಳಿಗೆ ನುಗ್ಗುತ್ತಿವೆ.

ಈ ನಡುವ ಗ್ರಾಮದ ರೈತರಾದ ಲಿಂಗರಾಜು ಸುಮಾರು 6 ಎಕರೆ ಜಮೀನಿನ ಪೈಕಿ ಒಂದು ಎಕರೆ ಪ್ರದೇಶದಲ್ಲಿ ಮೆಕ್ಕೆ ಜೋಳದ ಬೀಜ ತಂದು ಬೆಳೆ ಬೆಳೆದಿದ್ದರು. ಆದರೆ ಕಾಡಾನೆಗಳು ಹಾಗೂ ಹಂದಿಗಳು ಜಮೀನಿಗೆ ದಾಳಿ ಮಾಡಿದ್ದು ಬೆಳೆ  ನಾಶವಾಗಿದೆ, ಇದರಿಂದಾಗಿ ಅವರಿಗೆ  ಸುಮಾರು 30 ಸಾವಿರಕ್ಕೂ ಹೆಚ್ಚು ರೂ ನಷ್ಟ ಉಂಟಾಗಿದೆ.  ಈ ಬಗ್ಗೆ ಅಳಲು ತೋಡಿಕೊಂಡಿರುವ ಅವರು, ಈ ಸಂಬಂಧ ಪರಿಹಾರಕ್ಕಾಗಿ  ಸರಗೂರು ಅರಣ್ಯ ಇಲಾಖೆಗೆ ದೂರು ನೀಡಿದ್ದು, ಡಿ ಆರ್ ಎಫ್ ಓ ಲಿಂಗರಾಜು ಹಾಗೂ ಸಿಬ್ಬಂದಿ ವರ್ಗ  ಸ್ಥಳ ತೆರಳಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

10 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

10 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago