News Karnataka Kannada
Sunday, May 05 2024
ಚಾಮರಾಜನಗರ

ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಎಸ್‌ಡಿಎ

Accused
Photo Credit : By Author

ಚಾಮರಾಜನಗರ: ಗುತ್ತಿಗೆದಾರ ಪರವಾನಗಿ ಮಾಡಿಸಿಕೊಡಲು ಅರ್ಜಿದಾರರಿಂದ 7,500 ರೂ. ಲಂಚ ಪಡೆಯುತ್ತಿದ್ದ ಲೋಕೋಪಯೋಗಿ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ಗೋವಿಂದಯ್ಯ ಅವರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸರ ಕೈಗೆ ಮಂಗಳವಾರ ಸಿಕ್ಕಿ ಬಿದ್ದಿದ್ದಾರೆ.

ತಾಲ್ಲೂಕಿನ ಅಟ್ಟುಗೂಳೀಪುರ ಗ್ರಾಮದ ನಿವಾಸಿಯೊಬ್ಬರು ಕ್ಲಾಸ್-4 ಗುತ್ತಿಗೆದಾರ ಪರವಾನಗಿ ಪಡೆಯಲು ನಗರದಲ್ಲಿರುವ ಚಾಮರಾಜನಗರ ವಿಭಾಗದ ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ಎಸ್‌ಡಿಎ ಆಗಿರುವ ಗೋವಿಂದಯ್ಯ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಪರವಾನಗಿ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದ ಗೋವಿಂದಯ್ಯ ಅವರು, ಅಗತ್ಯ ದಾಖಲೆಗಳನ್ನು ತಂದುಕೊಡುವಂತೆ ತಿಳಿಸಿದ್ದರು.

ಪರವಾನಗಿ ಬಯಸಿದ್ದ ವ್ಯಕ್ತಿ ಜೂ. 13ರಂದು ಪೂರಕ ದಾಖಲೆಗಳೊಂದಿಗೆ ಗೋವಿಂದಯ್ಯ ಅವರನ್ನು ಸಂಪರ್ಕಿಸಿದ್ದರು. ಈ ಸಂದರ್ಭದಲ್ಲಿ ಪರವಾನಗಿ ಮಾಡಿಕೊಡಲು 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಷ್ಟು ದುಡ್ಡನ್ನೂ ಪಡೆದಿದ್ದರು. 20ರಂದು ಮತ್ತೆ 7,500 ನೀಡುವಂತೆ ಗೋವಿಂದಯ್ಯ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಅರ್ಜಿದಾರರು ಜೂನ್‌ 21ರಂದು ಬೆಳಿಗ್ಗೆ ಎಸಿಬಿ ಪೊಲೀಸರಿಗೆ ದೂರು ನೀಡಿದ್ದರು.

ಮಂಗಳವಾರ ಮಧ್ಯಾಹ್ನ ಲೋಕೋಪಯೋಗಿ ಇಲಾಖೆಯ ಕಚೇರಿಯಲ್ಲಿ ಗೋವಿಂದಯ್ಯ ಅವರು ದೂರುದಾರರಿಂದ 7,500 ರೂ. ಲಂಚ ಪಡೆಯುತ್ತಿದ್ದಾಗ ಕಾರ್ಯಾಚರಣೆ ನಡೆಸಿ ಅವರನ್ನು ಬಂಧಿಸಲಾಗಿದೆ. ಲಂಚವಾಗಿ ಪಡೆದ ಹ‌ಣವನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ತನಿಖೆ ಮುಂದುವರಿದಿದೆ ಎಂದು ಎಸಿಬಿ ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಎಸಿಬಿ ಡಿವೈಎಸ್‌ಪಿ ಸದಾನಂದ ತಿಪ್ಪಣ್ಣವರ್‌, ಇನ್‌ಸ್ಪೆಕ್ಟರ್‌ ಲಕ್ಷ್ಮೀಕಾಂತ್‌, ಹೆಡ್‌ ಕಾನ್‌ಸ್ಟೆಬಲ್‌ ಮಹೇಶ್‌, ಕಾನ್‌ಸ್ಟೆಬಲ್‌ಗಳಾದ ಸತೀಶ್‌, ಕೃಷ್ಣಕುಮಾರ್‌, ಮಹದೇವ್‌, ಕಾರ್ತಿಕ್‌, ನಾಗಲಕ್ಷ್ಮಿ ಸಿಬ್ಬಂದಿ ನಾಗೇಂದ್ರ, ಮಹದೇವಸ್ವಾಮಿ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು