News Karnataka Kannada
Monday, April 29 2024
ಚಾಮರಾಜನಗರ

ಬಂಡೀಪುರದಲ್ಲಿ ಕಾಡು ಪ್ರಾಣಿಗಳ ಮುಂದೆ ಸೆಲ್ಫಿ ಕ್ಲಿಕ್ಕಿಸಿ ಚೆಲ್ಲಾಟ

Selfie in front of wild animals in Bandipur
Photo Credit : News Kannada

ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿ ಸಂಚರಿಸುವ ಸವಾರರು ವಾಹನಗಳನ್ನು ನಡು ರಸ್ತೆಯಲ್ಲಿ ನಿಲ್ಲಿಸುತ್ತಿದ್ದು, ವನ್ಯ ಪ್ರಾಣಿಗಳ  ಜೀವನ ಶೈಲಿಗೆ ಕಿರಿಕಿರಿ ಉಂಟಾಗುತ್ತಿದೆ. ಹೀಗಿದ್ದರೂ ‌ಕೂಡ ಅರಣ್ಯಾಧಿಕಾರಿಗಳು ಇದಕ್ಕೆ ಕಡಿವಾಣ ಹಾಕುವ ಗೋಜಿಗೆ ಹೋಗಿಲ್ಲ.

ಬಂಡೀಪುರ‌‌ ರಾಷ್ಟ್ರೀಯ ಹೆದ್ದಾರಿ-67 ಹಾಗೂ ಕೇರಳ ರಾಷ್ಟ್ರೀಯ ಹೆದ್ದಾರಿ-766 ರಸ್ತೆಯ ಮೂಲಕ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚಾರ ಮಾಡುತ್ತವೆ. ಈ ವೇಳೆ ಆನೆ, ಜಿಂಕೆ, ನವಿಲು, ಕಾಡೆಮ್ಮೆ ಸೇರಿದಂತೆ ಇನ್ನಿತರ ಕಾಡು ಪ್ರಾಣಿಗಳು ರಸ್ತೆ ಬದಿಯಲ್ಲೆ ಕಂಡರೆ ವಾಹನ ಸವಾರರು ಕೂಡಲೇ‌ ರಸ್ತೆ ಮಧ್ಯದಲ್ಲಿಯೇ ನಿಲ್ಲಿಸಿ ಫೋಟೋ ಕ್ಲಿಕ್ಕಿಸಿಕೊಂಡು ವಿಡಿಯೋ ಮಾಡಲು ಮುಂದಾಗುತ್ತಾರೆ. ಇದರಿಂದ ಕಾಡು ಪ್ರಾಣಿಗಳಿಗೆ ಕಿರಿಕಿರಿ ಉಂಟಾಗುತ್ತಿದೆ. ಈ ಮಧ್ಯೆ ಬೈಕ್ ನಲ್ಲಿ ‌ತೆರಳುವ ಅನೇಕ ಮಂದಿ ಆನೆ ಕಂಡರೆ ಹತ್ತಿರಕ್ಕೆ ತೆರಳಿ ಸೆಲ್ಫಿ ತೆಗೆದುಕೊಳ್ಳುವ ದುಸ್ಸಾಹಸಕ್ಕೆ ಕೈ ಹಾಕುತ್ತಿದ್ದಾರೆ. ಈ ಸಂದರ್ಭದಲ್ಲಿ ಪ್ರಾಣಿಗಳು ಪ್ರವಾಸಿಗರ ಮೇಲೆ ದಾಳಿಗೆ ಮುಂದಾಗಿರುವ ಸಾಕಷ್ಟು ನಿದರ್ಶನಗಳಿವೆ.

ಬಂಡೀಪುರ ರಾಷ್ಟ್ರೀಯ ಅಭಯಾರಣ್ಯ ವ್ಯಾಪ್ತಿಯಲ್ಲಿ ಸಂಚರಿಸುವ ವೇಳೆ‌ ಯಾವೊಂದು ವಾಹನಗಳು ಕಾಡು ಪ್ರಾಣಿಗಳನ್ನು ಕಂಡರೆ ನಿಲ್ಲಿಸದಂತೆ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮವಹಿಸಿ, ನಿಲುಗಡೆ ಮಾಡುವ ವಾಹನ ಸವಾರರಿಗೆ ಭಾರಿ ಪ್ರಮಾಣದ ದಂಡ ವಿಧಿಸಬೇಕೆಂದು ಪರಿಸರವಾದಿಗಳು ಒತ್ತಾಯಿಸಿದ್ದಾರೆ.

ಬಂಡೀಪುರದಿಂದ ತಮಿಳುನಾಡಿಗೆ ಸಂಚರಿಸುವ ಮಾರ್ಗ ಮಧ್ಯೆ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಹಿನ್ನಲೆ ರಸ್ತೆ ಬದಿಯಲ್ಲಿಯೇ ಕಾಡಾನೆ, ನವಿಲುಗಳು ಅಧಿಕ ಸಂಖ್ಯೆಯಲ್ಲೇ ಕಾಣ ಸಿಗುತ್ತಿವೆ. ಇದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸಂಖ್ಯೆಗಳು ಕೂಡ ಅಧಿಕವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು