ಚಾಮರಾಜನಗರ: ಅತಿ ಹೆಚ್ಚು ಸುಳ್ಳು ಹೇಳುವ ಸಿಎಂಗಳಲ್ಲಿ ಸಿದ್ದರಾಮಯ್ಯಗೆ ಮೊದಲ ಸ್ಥಾನ ಕೊಡಬೇಕು ಎಂದು ಮಾಜಿ ಎಂಎಲ್ ಸಿ ರಮೇಶ್ ಹೇಳಿದರು.
ಚಾಮರಾಜನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮಹಾತ್ಮ ಗಾಂಧಿ ಕಾಂಗ್ರೆಸ್ ಇಲ್ಲ. ಇಲ್ಲಿ ಇರೋದು ಸಿದ್ದರಾಮಯ್ಯ ಹಾಗೂ ಡಿಕೆಶಿವಕುಮಾರ್ ಅವರ ಕಾಂಗ್ರೆಸ್ ಎಂದು ಹೇಳಿದರು.
ಕಿಯೋನಿಕ್ಸ್ ನ ಒಬ್ಬ ಐಎಎಸ್ ಅಧಿಕಾರಿ 4 ಕೋಟಿ ಲಂಚ ಕೊಟ್ಟಿದ್ದೇನೆ ಎಂದು ಹೇಳಿದ್ದಾರೆ. ಹಾಗಾದರೆ ಈ ಅಧಿಕಾರಿ ವಿರುದ್ದ ಯಾವ ಕ್ರಮ ಕೈಗೊಂಡಿದ್ದೀರಾ? ಎಂದು ಪ್ರಶ್ನಿಸಿದ್ದಾರೆ. ಆ ಲಂಚ ಕೊಟ್ಟ ಅಧಿಕಾರಿಯನ್ನು ಹತ್ತು ದಿನ ಕಡ್ಡಾಯ ರಜೆ ಮೇಲೆ ಕಳುಹಿಸಿದ್ದಾರೆ. ಇದು ಯಾವ ರೀತಿಯ ಪನಿಶ್ ಮೆಂಟ್? ಸಿದ್ದರಾಮಯ್ಯ ಅವರಿಂದ ಸಾಮಾಜಿಕ ನ್ಯಾಯ ಸಿಗುತ್ತಿಲ್ಲ ಎಂದು ಕಿಡಿ ಕಾರಿದ್ದಾರೆ.
ಸಿದ್ದರಾಮಯ್ಯ ಸದ್ಯದಲ್ಲೇ ತಮ್ಮ ಸ್ಥಾನ ತ್ಯಜಿಸಲಿದ್ದಾರೆ. ಮೂಲ ಕಾಂಗ್ರೆಸ್ ನವರು ಅಧಿಕಾರ ಹಿಡಿಯುತ್ತಾರೆ. ನಿಮ್ಮ ನಡೆ ಮುಖ್ಯಮಂತ್ರಿ ಸ್ಥಾನಕ್ಕೆ ಗೌರವ ತರುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು ಗ್ಯಾರಂಟಿ ಯೋಜನೆಗಳಿಂದ ಸಿದ್ದರಾಮಯ್ಯ ನಾಯಕತ್ವದಿಂದಲ್ಲ ಎಂದರು.
ಮಾತು ಮುಂದುವರೆಸಿ, ಈ ಬಾರಿ ಎಡಗೈ ಸಮಾಜಕ್ಕೆ ಬಿಜೆಪಿ ಅವಕಾಶ ಮಾಡಿಕೊಡಬೇಕು, ನಾನು ಕೂಡ ಚಾಮರಾಜನಗರ ಎಂಪಿ ಟಿಕೆಟ್ ಆಕಾಂಕ್ಷಿ ಎಂದು ಹೇಳಿಕೊಂಡಿದ್ದಾರೆ.