News Karnataka Kannada
Monday, April 29 2024
ಚಾಮರಾಜನಗರ

ಚಾಮರಾಜನಗರ: ಅಭಯಾರಣ್ಯದ ನಿರ್ಬಂಧಿತ ಪ್ರದೇಶವನ್ನು ಪ್ರವೇಶಿಸಿದ ಯುವಕರ ತಂಡ

Bandi
Photo Credit : By Author

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನಿರ್ಬಂಧಿತ ಪ್ರದೇಶದ ಪರಿಸರ ಸೂಕ್ಷ್ಮ ವಲಯದ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಹಿರೀಕೆರೆಯಲ್ಲಿ ಯುವಕರು ಮದ್ಯ ಸೇವಿಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹಿರಿಕೆರೆ ವನ್ಯಜೀವಿ ಅಭಯಾರಣ್ಯದ ವ್ಯಾಪ್ತಿಗೆ ಬರುವುದರಿಂದ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಆದರೆ ಕೆರೆ ವೀಕ್ಷಿಸುವ ನೆಪದಲ್ಲಿ ಯುವಕರು ಸ್ಥಳದಲ್ಲಿ ಕುಳಿತು ಮದ್ಯ ಸೇವಿಸಿದ್ದಾರೆ. ಹಿರಿಕೆರೆ ಗೋಪಾಲಸ್ವಾಮಿ ಬೆಟ್ಟ ವಲಯದ ಸೂಕ್ಷ್ಮ ಪರಿಸರ ಪ್ರದೇಶವಾಗಿರುವುದರಿಂದ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಸ್ಥಳೀಯರು ಮತ್ತು ಇತರ ಸ್ಥಳಗಳಿಂದ ಬರುವ ಪ್ರವಾಸಿಗರು ಕೆರೆಗೆ ಭೇಟಿ ನೀಡಲು ಅರಣ್ಯ ಸಿಬ್ಬಂದಿ ಅವಕಾಶ ನೀಡುತ್ತಿಲ್ಲ. ಆದರೆ ಮೋಜು ಮಾಡಲು ಅನುಮತಿ ನೀಡಿದವರು ಯಾರು ಎಂಬ ಪ್ರಶ್ನೆ ಎದ್ದಿದೆ. ಹಿರೀಕೆರೆ ಪರಿಸರ ಸೂಕ್ಷ್ಮ ವಲಯದಲ್ಲಿ ಬಂಡೀಪುರ ಅಭಯಾರಣ್ಯದ ಅರಣ್ಯಾಧಿಕಾರಿಗಳ ವಾಹನಗಳನ್ನು ಹೊರತುಪಡಿಸಿ ಖಾಸಗಿ ವ್ಯಕ್ತಿಗಳ ಬೈಕ್, ಕಾರು ಸೇರಿದಂತೆ ಇತರೆ ವಾಹನಗಳು ಸಂಚರಿಸುವಂತಿಲ್ಲ. ಆದರೆ ಅಧಿಕಾರಿಗಳ ಕೃಪಾಕಟಾಕ್ಷದಿಂದ ಕೆಲವರು ವಾಹನ ಸಮೇತ ಮೊಕ್ಕಾಂ ಹೂಡಿ ಮಸ್ತಿಯಲ್ಲಿ ತೊಡಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅರಣ್ಯಾಧಿಕಾರಿಗಳು ಜನರನ್ನು ಇಎಸ್‌ಜೆಡ್ ಒಳಗೆ ಬಿಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು