News Karnataka Kannada
Monday, April 29 2024
ಚಾಮರಾಜನಗರ

ಮೇವು ತರಲು ಹೋದ ವ್ಯಕ್ತಿ ಮೇಲೆ ಹುಲಿ ದಾಳಿ

ಮದ್ಯದ ಅಮಲಿನಲ್ಲಿದ್ದ ಪತ್ನಿ, ಪತಿಯನ್ನು ನಿಂದಿಸಿದಕ್ಕೆ ಆತ ಮರದ ಹಲಗೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಭುವನೇಶ್ವರದಲ್ಲಿ ನಡೆದಿದೆ.
Photo Credit : News Kannada

ಗುಂಡ್ಲುಪೇಟೆ: ಮೇವು ತರಲು ಜಮೀನಿಗೆ ತೆರಳಿದ ವ್ಯಕ್ತಿ ಮೇಲೆ ಹುಲಿ ದಾಳಿ ನಡೆಸಿ ಕೊಂದು ತಿಂದು ಹಾಕಿರುವ ಘಟನೆ ತಾಲೂಕಿನ ಆಡಿನ ಕಣಿವೆ ಗ್ರಾಮದಲ್ಲಿ ನಡೆದಿದೆ.

ಆಡಿನ ಕಣಿವೆ ಗ್ರಾಮದ ಜೇನು ಕುರುಬ ಸಮುದಾಯದ ವ್ಯಕ್ತಿ ಬಸವಯ್ಯ(55) ಹುಲಿ ದಾಳಿಗೆ ಬಲಿಯಾದ ವ್ಯಕ್ತಿ. ಇವರು ಮೇಕೆಗಳಿಗೆ ಮೇವು ತರಲೆಂದು ಜಮೀನಿನ ಕಡೆಗೆ ತೆರಳಿದ್ದು, ಈ ವೇಳೆ ಹುಲಿ ಅವರ ಮೇಲೆ ದಾಳಿ ಮಾಡಿ ಕೊಂದು ಅವರನ್ನು ಕಾಡಿನೊಳಕ್ಕೆ ಎಳೆದೊಯ್ದು ದೇಹದ ಕೆಲವು ಭಾಗವನ್ನು ತಿಂದು ಹಾಕಿದೆ.

ಮೇವು ತರಲೆಂದು ಜಮೀನಿಗೆ ಹೋದ ಬಸವಯ್ಯ ಮರಳಿ ಬಾರದೆ ಇದ್ದಾಗ ಇತ್ತ ಮನೆಯಲ್ಲಿ ಆತಂಕ ಶುರುವಾಗಿದೆ. ಹೀಗಾಗಿ ಗಾಬರಿಗೊಂಡ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಅರಣ್ಯ ಇಲಾಖೆ ಸಿಬ್ಬಂದಿ ಹುಡುಕಾಟ ನಡೆಸಿದ್ದು, ಬಂಡೀಪುರ ರಾಷ್ಟ್ರೀಯ ಉದ್ಯಾನವನ ಕುಂದಕೆರೆ ಅರಣ್ಯ ವಲಯದ ವ್ಯಾಪ್ತಿಗೆ ಬರುವ ವೀರೇಶ್ವರ ಗುಡ್ಡ ಎಂಬ ಅರಣ್ಯದಲ್ಲಿ ಬಸವಯ್ಯನ ಅರ್ಧ ದೇಹ ಪತ್ತೆಯಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಕುಂದಕೆರೆ ವಲಯ ಅರಣ್ಯಾಧಿಕಾರಿ ನವೀನ್ ಕುಮಾರ್ ಮತ್ತು ಸಿಬ್ಬಂದಿ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಅರಣ್ಯ ವ್ಯಾಪ್ತಿಯಲ್ಲಿ ಮಾನವ-ಪ್ರಾಣಿ ಸಂಘರ್ಷ ಮುಂದುವರಿದಿದ್ದು, ಕಳೆದ ತಿಂಗಳು ಬಂಡೀಪುರ ಅರಣ್ಯ ಪ್ರದೇಶ ವ್ಯಾಪ್ತಿಗೆ ಒಳಪಡುವ ನಂಜನಗೂಡು ತಾಲೂಕಿನ ಯಡಿಯಾಲ ವ್ಯಾಪ್ತಿಯ ಬಳ್ಳೂರ ಹುಂಡಿಯಲ್ಲಿ ಹುಲಿ ದಾಳಿಗೆ ವ್ಯಕ್ತಿಯೋರ್ವ ಮೃತಪಟ್ಟಿದ್ದನು. ಈ ಘಟನೆ ಮಾಸುವ ಮುನ್ನವೆ ಹುಲಿ ದಾಳಿಗೆ ಮತ್ತೋರ್ವ ಬಲಿಯಾಗಿರುವುದು ಕಾಡಂಚಿನ ಗ್ರಾಮದ ಜನರಲ್ಲಿ ಆತಂಕ ಮೂಡಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು