News Karnataka Kannada
Saturday, May 11 2024
ಚಾಮರಾಜನಗರ

ದನ ಮೇಯಿಸಲು ಹೋಗಿದ್ದ ವ್ಯಕ್ತಿಗಳಿಬ್ಬರ ಮೇಲೆ ಕಾಡಾನೆ ದಾಳಿ

Two men attacked by wild elephant while grazing cattle
Photo Credit : News Kannada

ಚಾಮರಾಜನಗರ: ದನ ಮೇಯಿಸಲು ಹೋಗಿದ್ದ ವ್ಯಕ್ತಿಗಳಿಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆಮಾದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ದೀನಳ್ಳಿ ಗ್ರಾಮದ ಸಮೀಪ ಜರುಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರಗಬಾಳು ಗ್ರಾಮದ ಬಸಪ್ಪನವರ ಮಕ್ಕಳಾದ ಸಿದ್ದಮರಿ, ಗಿರಿಯಪ್ಪ ಗಾಯಗೊಂಡ ವ್ಯಕ್ತಿಗಳಾಗಿದ್ದಾರೆ.

ಘಟನೆ ವಿವರ: ಯರಗಬಾಳು ಗ್ರಾಮದ ಸಿದ್ದಮರಿ ಗಿರಿಯಪ್ಪ ರವರು ತಮಿಳುನಾಡಿನಲ್ಲಿ ನಡೆಯುವ ಆಡಿ ಜಾತ್ರೆಗೆ ತಮ್ಮ ದನಗಳನ್ನು ಮಾರಾಟ ಮಾಡಲು ತೆರಳಿದ್ದರು. ತದನಂತರ ಮಾರಾಟವಾಗದ ದನಗಳನ್ನು ಅರಣ್ಯದಲ್ಲಿ ಮೇಯಿಸಲು ತೆರಳಿದ್ದ ವೇಳೆ ಕಾಡಾನೆ ದಾಳಿ ಮಾಡಿದೆ, ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ. ನಂತರ ಗ್ರಾಮಸ್ಥರು ನೋಡಿ ರಾಮಪುರ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ. ಇಬ್ಬರು ಪ್ರಾಣ ಪಾಯದಿಂದ ಪಾರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು