ಗುಂಡ್ಲುಪೇಟೆ : ದ್ವಿಚಕ್ರ ವಾಹನ ಮತ್ತು ಟವೇರಾ ಕಾರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಸವಾಪುರ ಬಳಿಯ ಸೆತ್ತೆಕಟ್ಟೆ ಬಳಿ ನಡೆದಿದೆ.
ಮೃತ ಯುವಕ ಅಜಯ್ ಎಂದು ತಿಳಿದುಬಂದಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. ವಿಚಾರ ತಿಳಿದು ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಯುವಕನ ಶವವನ್ನು ಪಟ್ಟಣ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತ ಪಟ್ಟ ಯುವಕನ ವಿಳಾಸ ಇನ್ನು ತಿಳಿದುಬಂದಿಲ್ಲ. ಘಟನೆಗೆ ಸಬಂದಿಸಿದಂತೆ ಗುಂಡ್ಲುಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.