ಚಾಮರಾಜನಗರ: ಯುಗಾದಿ ಜಾತ್ರಾ ಮಹೋತ್ಸವ ಪ್ರಯುಕ್ತ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಾಲನೆ ನೀಡಲಾಗಿದೆ.
ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ವತಿಯಿಂದ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ಯುಗಾದಿ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಭಕ್ತರಿಗೆ ಯಾವುದೇ ರೀತಿಯ ತೊಂದರೆ ಹಾಗೂ ಗೊಂದಲ ಆಗದಂತೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ.
ಪ್ರಾಧಿಕಾರದ ಕಾರ್ಯದರ್ಶಿ ರಘು ರವರು ಖುದ್ದಾಗಿ ದಾಸೋಹ ಭವನಕ್ಕೆ ಭೇಟಿ ನೀಡಿ, ಭಕ್ತರಿಗೆ ನೀಡಲಾಗುವ ಪ್ರಸಾದ ಬಗ್ಗೆ ಪರಿಶೀಲನೆ ನಡೆಸಿದರು. ಬಿಸಿಲಿನ ತಾಪಮಾನದಿಂದ ಭಕ್ತರು ಬಳಲದಿರಲಿ ಎನ್ನುವ ಸಲುವಾಗಿ ದೇವಸ್ಥಾನ ಸುತ್ತಲೂ ನೀರು ಹಾಕಿ ಭಕ್ತರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.
ಭಾನುವಾರ ಒಂದೇ ದಿನ ದೇವಸ್ಥಾನಕ್ಕೆ ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸಿ ಪವಾಡ ಪುರುಷ ಮಲೆ ಮಹದೇಶ್ವರ ದರ್ಶನ ಪಡೆದಿದ್ದಾರೆ ಎಂದು ಮಾಹಿತಿ ನೀಡಿರುವ ಪ್ರಾಧಿಕಾರವು ಮಂಗಳವಾರ ಯುಗಾದಿಯಂದು ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಎಂದು ಹೇಳಲಾಗಿದೆ.