News Karnataka Kannada
Friday, May 10 2024
ಚಾಮರಾಜನಗರ

ಚಾಮರಾಜನಗರ: ಕಾಡಾನೆ ದಾಳಿಗೆ ವಾಚರ್ ಸಾವು

Watcher killed in wild elephant attack
Photo Credit : By Author

ಚಾಮರಾಜನಗರ: ಕಾಡಾನೆ ದಾಳಿಯಿಂದ ಫಾರೆಸ್ಟ್ ವಾಚರ್ ಸಾವನ್ನಪ್ಪಿರುವ ಘಟನೆ ಯಳಂದೂರು ತಾಲೂಕಿನ ಸಿಮೇಟಿ ಕ್ಯಾಂಪ್ ಬಳಿ ನಡೆದಿದೆ.

ಅರಣ್ಯ ಇಲಾಖೆ ವಾಚರ್ ಕಿಶೋರ್ ಕುಮಾರ್( 45) ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟವರು. ಅವರ ಪುತ್ರ ಮಾದೇಗೌಡ(20) ಅವರ ಸೊಂಟಕ್ಕೆ ಪೆಟ್ಟಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಮೇಟಿ ಕ್ಯಾಂಪ್ಗೆ ಬೈಕ್ನಲ್ಲಿ ತೆರಳುವಾಗ ಕಾಡಾನೆ ದಾಳಿ ಮಾಡಿ ಬೈಕ್ ಹಾಗೂ ಕಿಶೋರ್ ಕುಮಾರ್ ಅವರನ್ನು ತುಳಿದು ಹಾಕಿದೆ. ಪರಿಣಾಮ ಅವರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು