ಚಾಮರಾಜನಗರ: ಕಾಡಾನೆ ದಾಳಿಯಿಂದ ಫಾರೆಸ್ಟ್ ವಾಚರ್ ಸಾವನ್ನಪ್ಪಿರುವ ಘಟನೆ ಯಳಂದೂರು ತಾಲೂಕಿನ ಸಿಮೇಟಿ ಕ್ಯಾಂಪ್ ಬಳಿ ನಡೆದಿದೆ.
ಅರಣ್ಯ ಇಲಾಖೆ ವಾಚರ್ ಕಿಶೋರ್ ಕುಮಾರ್( 45) ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟವರು. ಅವರ ಪುತ್ರ ಮಾದೇಗೌಡ(20) ಅವರ ಸೊಂಟಕ್ಕೆ ಪೆಟ್ಟಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಮೇಟಿ ಕ್ಯಾಂಪ್ಗೆ ಬೈಕ್ನಲ್ಲಿ ತೆರಳುವಾಗ ಕಾಡಾನೆ ದಾಳಿ ಮಾಡಿ ಬೈಕ್ ಹಾಗೂ ಕಿಶೋರ್ ಕುಮಾರ್ ಅವರನ್ನು ತುಳಿದು ಹಾಕಿದೆ. ಪರಿಣಾಮ ಅವರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.