News Karnataka Kannada
Tuesday, May 07 2024
ಚಾಮರಾಜನಗರ

ಯಳಂದೂರು: ನೇಣು ಬಿಗಿದ ಸ್ಥಿತಿಯಲ್ಲಿ ಆನೆ ಕಾವಲುಗಾರನ ಶವಪತ್ತೆ

Yelandur: Body of elephant watchman found hanging
Photo Credit : By Author

ಯಳಂದೂರು: ನೇಣು ಬಿಗಿದ ಸ್ಥಿತಿಯಲ್ಲಿ ತಾತ್ಕಾಲಿಕ ಆನೆ ಕಾವಲುಗಾರನ ಶವ ಪತ್ತೆಯಾಗಿರುವ ಘಟನೆ ತಾಲೂಕಿನ ಟಿ. ಹೊಸೂರು ಗ್ರಾಮದಲ್ಲಿ ನಡೆದಿದ್ದು, ಈ ಸಾವಿನ ಸುತ್ತ ಅನುಮಾನಗಳು ಹುಟ್ಟಿಕೊಂಡಿವೆ.

ಹೊಸೂರು ಗ್ರಾಮದ ನಿವಾಸಿ ನಂಜೇಗೌಡ (45) ಎಂಬ ವ್ಯಕ್ತಿಯೇ ಶವವಾಗಿ ಪತ್ತೆಯಾದವನು. ಈತ ಬಿಆರ್‌ಟಿ ಹುಲಿ ರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ತಾತ್ಕಾಲಿಕ ಆನೆ ಕಾವಲುಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದನು.

ಆದರೆ ಗ್ರಾಮದ ತಿಪ್ಪೆಕಟ್ಟೆ ರಸ್ತೆಯ ಬಳಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿರುವ ಬಗ್ಗೆ ಗ್ರಾಮಸ್ಥರು ಯಳಂದೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರ ತಂಡ ಹಾಗೂ ಶ್ವಾನದಳದ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ನಂತರ ಶವವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ.

ಈ ಬಗ್ಗೆ ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮವನ್ನು ವಹಿಸಿದ್ದಾರೆ. ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದರ ಬಗ್ಗೆ ಪೊಲೀಸರ ತನಿಖೆಯಿಂದಷ್ಟೆ ತಿಳಿದು ಬರಬೇಕಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು