ಚಾಮರಾಜನಗರ

ಯಳಂದೂರು: ಉದ್ಯೋಗಕ್ಕಾಗಿ ಹೆಚ್ಚಿನ ಶ್ರಮ ಅತ್ಯಗತ್ಯ – ಎ.ಆರ್.ಕೃಷ್ಣಮೂರ್ತಿ

ಯಳಂದೂರು: ಇಂದಿನ ಜಗತ್ತು ಸ್ಪರ್ಧಾತ್ಮಕ ಯುಗವಾಗಿದೆ. ನಿರುದ್ಯೋಗಿ ಯುವಜನತೆ ತಮ್ಮ ಮನೆಯ ಸುತ್ತಮುತ್ತಲೇ ಉದ್ಯೋಗಬೇಕು ಎನ್ನುವ ಹಠ ಬಿಡಬೇಕು. ಉದ್ಯೋಗ ಅರಸಿಕೊಂಡು ಬೇರೆಡೆ ಹೋಗಬೇಕು. ಇದಕ್ಕಾಗಿ ಹೆಚ್ಚಿನ ಶ್ರಮ ಅಗತ್ಯ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಸಲಹೆ ನೀಡಿದರು.

ಸಮೀಪದ ಸಂತೆಮರಹಳ್ಳಿಯಲ್ಲಿ ಡಿಎಂ ಚಾರಿಟಬಲ್ ಟ್ರಸ್ಟ್ ವತಿಯಿಂದ ಈಚೆಗೆ ನಡೆದ ಕೌಶಲ್ಯ ತರಬೇತಿ ಪ್ರಶಿಕ್ಷಣಾರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಇಂದಿನ ಯುವ ಜನತೆ ತಮ್ಮಲ್ಲಿ ವಿವಿಧ ಉದ್ಯೋಗಾಧಾರಿತ ಕೌಶಲ್ಯವನ್ನು ಹೆಚ್ಚಿಸಿಕೊಂಡರೆ ಅವರಿರುವಲ್ಲಿಯೇ ಉದ್ಯೋಗ ದೊರಕುತ್ತದೆ. ಆದ್ದರಿಂದ ಇಂದಿನ ಯುವಕರು ಯುವತಿಯರು ಶಿಕ್ಷಣದ ಜೊತೆ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕು. ನಮ್ಮ ಗ್ರಾಮೀಣ ಯುವಜನತೆ ನಗರ ಪಟ್ಟಣಗಳಲ್ಲಿ ಉದ್ಯೋಗ ಸಿಕ್ಕರೂ ಹೋಗುತ್ತಿಲ್ಲ. ಏಕೆಂದರೆ ಅವರು ತಮ್ಮ ಮನೆಯ ಸುತ್ತಮುತ್ತಲೇ ಉದ್ಯೋಗ ಬಯಸುತ್ತಿದ್ದಾರೆ. ತಮಗೆ ಮಾಹಿತಿ ಇರುವಂತೆ ಬೆಂಗಳೂರಿನಲ್ಲಿ 2000ಕ್ಕೂ ಹೆಚ್ಚು ಉದ್ಯೋಗ ಖಾಸಗಿ ಕಂಪನಿಗಳಲ್ಲಿ ಲಭ್ಯವಿದೆ. ಆದರೂ ನಮ್ಮ ಯುವ ಜನತೆ ಅಲ್ಲಿ ಉದ್ಯೋಗ ಪಡೆಯಲು ಮುಂದಾಗುತ್ತಿಲ್ಲ. ಇಂತಹ ಮನಸ್ಥಿತಿಯಿಂದ ಯುವ ಜನತೆ ಹೊರಬರಬೇಕು ಎಂದು ಶಾಸಕರು ಕರೆ ನೀಡಿದರು.

ಹಿಂದಿನ ಸರ್ಕಾರ ಲಕ್ಷಾಂತರ ಜನರಿಗೆ ಉದ್ಯೋಗ ನೀಡುವ ಭರವಸೆ ನೀಡಿತ್ತು. ಆದರೆ ಉದ್ಯೋಗ ಎನ್ನುವುದು ಈಗ ಕನಸಿನ ಮಾತಾಗಿದೆ. ಆದರೆ ಈಗ ನಮ್ಮ ಸರಕಾರ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವವರೆಗೂ ನೆರವು ನೀಡುವ ಯುವಶಕ್ತಿ ಎನ್ನುವ ಗ್ಯಾರಂಟಿ ಯೋಜನೆಯನ್ನು ಸದ್ಯದಲ್ಲೇ ಜಾರಿಗೊಳಿಸಲಿದೆ, ಇದನ್ನು ಬಳಸಿಕೊಳ್ಳಿ. ಸಂತೆಮರಹಳ್ಳಿ ಸುತ್ತಮುತ್ತ ನಿರುದ್ಯೋಗಿಗಳಿಗೆ ಈ ಟ್ರಸ್ಟ್ ಕೌಶಲ್ಯ ಅಭಿವೃದ್ಧಿಗಳನ್ನು ನೀಡಿದೆ. ಕೆಲವರಿಗೆ ಉದ್ಯೋಗವನ್ನು ದೊರಕಿಸಿರುವುದು ಅತ್ಯುತ್ತಮ ಕಾರ್ಯ ಎಂದು ಶಾಸಕರು.

ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಮಾತನಾಡಿ ಇಂದಿನ ಯುವ ಜನತೆಗೆ ಕೌಶಲ್ಯದ ಜೊತೆಗೆ ನಂಬಿಕಾರ್ಹತೆ ಬಹಳ ಮುಖ್ಯ. ಇಂದಿನ ಸ್ಪರ್ಧಾತ್ಮಕ ಸಮಾಜದಲ್ಲಿ ಎಷ್ಟೇ ವಿದ್ಯಾವಂತರಾಗಿದ್ದರೂ ಕೌಶಲ್ಯ ಇಲ್ಲದಿದ್ದರೆ ಅದಕ್ಕೆ ನಿರೀಕ್ಷಿತ ಲಾಭ ಸಿಗುವುದಿಲ್ಲ. ಆದ್ದರಿಂದ ಕೌಶಲ್ಯ ಎನ್ನುವುದು ಇಂದಿನ ಅತ್ಯಗತ್ಯ. ಭಾರತದ ಯುವ ಜನತೆಗೆ ಅದರಲ್ಲೂ ಕೌಶಲ್ಯ ಭರಿತ ಯುವಕರಿಗೆ ಬೇಡಿಕೆ ಹೆಚ್ಚಾಗುತ್ತಿದ್ದು ಇದನ್ನು ಸದ್ಬಳಕೆ ಮಾಡಿಕೊಳ್ಳಲು ಯುವಕರು ಸಜ್ಜಾಗಬೇಕು ಎಂದು ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.

ಇದಕ್ಕೂ ಮುನ್ನ ಡಿಎಂ ಚಾರಿಟೇಬಲ್ ಟ್ರಸ್ಟ್ ಮತ್ತು ಕೌಶಲ್ಯ ಅಭಿವೃದ್ಧಿ ಇಲಾಖೆಯಿಂದ ವಿವಿಧ ತರಬೇತಿ ಪಡೆದಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಇದೇ ವೇಳೆ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಶೇ. 98ರಷ್ಟು ಅಂಕ ಪಡೆದ 15ಕ್ಕೂ ಹೆಚ್ಚು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಎಸ್‌ಬಿಐನ ಶಾಖಾ ವ್ಯವಸ್ಥಾಪಕ ಚನ್ನಕೇಶವ, ಡಿಎಂ ಟ್ರಸ್ಟ್‌ನ ಸಲಹೆಗಾರ ಜೈ ಶಂಕರ್, ಪ್ರಾಂಶುಪಾಲರುಗಳಾದ ಶಿವಣ್ಣ, ತಮ್ಮಯ್ಯ, ಜಯಶೀಲ, ಸಬ್‌ ಇನ್ಸ್ ಪೆಕ್ಟರ್ ಹನುಮಂತಪ್ಪ ಉಪ್ಪಾರ್, ತಾಜುದ್ದೀನ್ ಸೇರಿದಂತೆ ಇತರರು ಹಾಜರಿದ್ದರು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

1 hour ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

1 hour ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago