ಚಾಮರಾಜನಗರ: ಬದುಕಿನ ಬಗ್ಗೆ ನೂರಾರು ಕನಸು ಕಂಡಿದ್ದ ಯುವಕನೊಬ್ಬ ತನ್ನ ಕನಸು ಈಡೇರುವ ಲಕ್ಷಣ ಕಾಣುತ್ತಿಲ್ಲ ಎಂದು ಬೇಸರಗೊಂಡು ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದ ಮರಿಯಾಲ ಬೇಡರಪುರ ನಡುವೆ ಇರುವ ರೈಲ್ವೆ ಹಳಿಯಲ್ಲಿ ನಡೆದಿದೆ.
ಚಾಮರಾಜನಗರ ತಾಲ್ಲೂಕು ಬದನಗುಪ್ಪೆ ಗ್ರಾಮದ ರಘು (22) ಸಾವನ್ನಪ್ಪಿದವನು. ಈತ ತನ್ನ ತಾಯಿಯೊಂದಿಗೆ ವಾಸವಾಗಿದ್ದನು. ಇವರ ಜಮೀನು ಕೈಗಾರಿಕೆ ಬಡಾವಣೆಗೆ ಸೇರ್ಪಡೆ ಗೊಂಡಿತ್ತು ಆದರೆ ಪರಿಹಾರ ಹಣದ ಸರಿಯಾಗಿ ಬಂದಿರಲಿಲ್ಲ. ಇದರಿಂದ ಜೀವನ ನಿರ್ವಹಣೆ ಕಷ್ಟವಾಗಿತ್ತು. ಹೀಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಆದರೆ ಸಾವಿಗೆ ಖಚಿತ ಕಾರಣಗಳು ಇನ್ನೂ ಕೂಡ ತಿಳಿದು ಬಂದಿಲ್ಲ. ಈ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.