News Karnataka Kannada
Wednesday, May 08 2024
ಚಾಮರಾಜನಗರ

ಕಾಡಾನೆ ದಾಳಿಗೆ ಸಿಲುಕಿ ಯುವಕ ಸಾವು: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ

ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದ ಯುವಕನ ಕುಟುಂಬಸ್ಥರಿಗೆ ಮಾಜಿ ಶಾಸಕ ಆರ್ ನರೇಂದ್ರ ಸಾಂತ್ವನ ಹೇಳುವ ಜೊತೆಗೆ ಪರಿಹಾರ ಹಣದ ಭರವಸೆ ನೀಡಿದ್ದಾರೆ.
Photo Credit : NewsKarnataka

ಚಾಮರಾಜನಗರ: ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದ ಯುವಕನ ಕುಟುಂಬಸ್ಥರಿಗೆ ಮಾಜಿ ಶಾಸಕ ಆರ್ ನರೇಂದ್ರ ಸಾಂತ್ವನ ಹೇಳುವ ಜೊತೆಗೆ ಪರಿಹಾರ ಹಣದ ಭರವಸೆ ನೀಡಿದ್ದಾರೆ.

ಹನೂರು ತಾಲೂಕಿನ ಕತ್ತೆ ಕಾಲ್ ಪೋಡು ಗ್ರಾಮದ ಜಡಯ್ಯ ಎಂಬುವರ ಪುತ್ರ ಮಾದ(೨೩) ಆನೆ ದಾಳಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದರು.

ಬುಧವಾರ ರಾತ್ರಿ ಕಾರ್ಯನಿಮಿತ್ತ ಹಿರಿಯಂಬಲ ಗ್ರಾಮಕ್ಕೆ ತೆರಳಿ ಕತ್ತೆ ಕಾಲ್ ಪೋಡು ಗ್ರಾಮಕ್ಕೆ ವಾಪಸ್ ಆಗುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದ. ಯುವಕ ಕಾಡಾನೆ ದಾಳಿಗೆ ಮೃತಪಟ್ಟಿರುವ ವಿಚಾರವನ್ನು ಸ್ಥಳೀಯರು ಗುರುವಾರ ಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ಮಾಹಿತಿ ತಿಳಿದ ತಕ್ಷಣ ಬೈಲೂರು ವಲಯ ಅರಣ್ಯ ಅಧಿಕಾರಿ ಪ್ರಮೋದ್ ಹಾಗೂ ಪೊಲೀಸ್ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತ ಶವವನ್ನು ಹನೂರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಿದರು.

ಮಾಜಿ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿ, ಘಟನೆ ಕುರಿತು ಮಾಹಿತಿ ಪಡೆದುಕೊಂಡರು. ನಂತರ ಡಿ ಎಫ್ ಒ ರವರ ಜೊತೆ ಮಾತನಾಡಿದ್ದು 5 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಉಳಿದ ಹತ್ತು ಲಕ್ಷ ಹಣವನ್ನು ಆದಷ್ಟು ಬೇಗ ಕೊಡಿಸುವಂತೆ ಸೂಚನೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು