ಗುಂಡ್ಲುಪೇಟೆ: ಸ್ನೇಹಿತರೊಟ್ಟಿಗೆ ಕೃಷಿ ಹೊಂಡಕ್ಕೆ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ನಡೆದಿದೆ.
ಗೋಪಾಲಪುರ ಗ್ರಾಮದ ಸಿದ್ದರಾಜು ಎಂಬವರ ಪುತ್ರ ನಿಂಗರಾಜು (18) ಮೃತ ದುರ್ದೈವಿ.
ಇಂದು ಮಧ್ಯಾಹ್ನ ಅದೇ ಗ್ರಾಮದ ಕೃಷ್ಣಯ್ಯ ಎಂಬವರ ಜಮೀನಿನ ಕೃಷಿ ಹೊಂಡದಲ್ಲಿ ಇಳಿದಿದ್ದಾರೆ ಆದ್ರೆ ಈಜಲು ಬಾರದ ನಿಂಗರಾಜು ಮೇಲೆ ಬರಲಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ.
ಇನ್ನು ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಪುತ್ರನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.