ಪಿರಿಯಾಪಟ್ಟಣ: ಮತ್ತೆ ರೈತರ ಆತ್ಮಹತ್ಯೆ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು, ಇದೀಗ ಮುಖ್ಯಮಂತ್ರಿ ತವರು ಜಿಲ್ಲೆಯಲ್ಲಿ ರೈತನೊಬ್ಬ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಪಿರಿಯಾಪಟ್ಟಣ ತಾಲ್ಲೂಕಿನ ಅಂಕನಹಳ್ಳಿ ಗ್ರಾಮದ ರೈತ ದೇವರಾಜು (42)ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾದವರು. ಇವರು ಮೂಲತಃ ರೈತರಾಗಿದ್ದ ದೇವರಾಜು ಹಲವು ವರ್ಷಗಳಿಂದ ಬೆಳಗಿನ ವೇಳೆ ಪಿರಿಯಾಪಟ್ಟಣದಲ್ಲಿ ಹಲವು ದಿನಪತ್ರಿಕೆಗಳನ್ನು ಮನೆ ಮನೆಗೆ ವಿತರಣೆ ಮಾಡುತ್ತಿದ್ದರು, ಮೃತರ ಹೆಸರಿನಲ್ಲಿ 1.28 ಎಕರೆ ಜಮೀನಿದ್ದು ವ್ಯವಸಾಯ ಉದ್ದೇಶದಿಂದ ವಿವಿಧ ಬ್ಯಾಂಕ್ ಸಹಕಾರ ಸಂಘಗಳಲ್ಲಿ ಸಾಲ ಮಾಡಿದ್ದರು.
ಈ ನಡುವೆ ಮುಂಗಾರು ವಿಳಂಬವಾದ ಹಿನ್ನಲೆಯಲ್ಲಿ ಸಾಲ ಮಾಡಿ ಜಮೀನಿನಲ್ಲಿ ಬೆಳೆದ ಬೆಳೆ ಸರಿಯಾಗಿ ಬಾರದೆ ನಷ್ಟವಾಗಿದ್ದು, ಇದರಿಂದ ಸಾಲಹೆಚ್ಚಾಗಿ ಅದನ್ನು ತೀರಿಸುವುದು ಕಷ್ಟವಾಯಿತು. ಹೀಗಾಗಿ ಸಾಲದಬಾಧೆಯಿಂದ ಮನನೊಂದು ತಮ್ಮ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ಧಾರೆ ಎಂದು ಮೃತರ ಪತ್ನಿ ಗೌರಿ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸಹಾಯವಾಣಿಗೆ ಕರೆ ಮಾಡಿ:
ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.