News Karnataka Kannada
Tuesday, April 30 2024
ಮೈಸೂರು

ಹಾಲು ಉತ್ಪಾದಕರಿಗೆ ಹಣ ಜಮೆ ಮಾಡುವಂತೆ ಆಗ್ರಹ

ಹಾಲು ಉತ್ಪಾದಕರಿಗೆ ಕೂಡಲೇ ಹಣವನ್ನು ಜಮೆ ಮಾಡುವಂತೆ ನಂಜನಗೂಡಿನಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಂಪಾಪುರ ಗ್ರಾಮದ ಹಾಲು ಉತ್ಪಾದಕರು ಒತ್ತಾಯವನ್ನು ಮಾಡಿದ್ದಾರೆ.
Photo Credit : NewsKarnataka

ನಂಜನಗೂಡು: ಹಾಲು ಉತ್ಪಾದಕರಿಗೆ ಕೂಡಲೇ ಹಣವನ್ನು ಜಮೆ ಮಾಡುವಂತೆ ನಂಜನಗೂಡಿನಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಂಪಾಪುರ ಗ್ರಾಮದ ಹಾಲು ಉತ್ಪಾದಕರು ಒತ್ತಾಯವನ್ನು ಮಾಡಿದ್ದಾರೆ.

ನಂಜನಗೂಡು ನಗರದ ತಾಲೂಕು ಆಡಳಿತ ಭವನದ ಮುಂಭಾಗದಲ್ಲಿ ಇಂದು ಹಂಪಾಪುರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದಲ್ಲಿ ಹಾಲು ಉತ್ಪಾದಕರಿಗೆ ಹಣ ಜಮೆಯಾಗಿಲ್ಲ.

ಸರ್ಕಾರದಿಂದ ನೀಡುವ ಪ್ರೋತ್ಸಾಹ ಧನವನ್ನು ಸರಿಯಾಗಿ ನೀಡುತ್ತಿಲ್ಲ. ಮಹಿಳಾ ಸಹಕಾರ ಸಂಘ ಆಗಿರುವುದರಿಂದ ಮಹಿಳಾ ಕಾರ್ಯದರ್ಶಿ ಕಾರ್ಯನಿರ್ವಹಿಸಬೇಕು. ಆದರೆ ಅವರ ಪತಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಲನ್ನು ಅವರ ಮನೆಯಲ್ಲಿಯೇ ಸಂಗ್ರಹ ಮಾಡುತ್ತಿದ್ದಾರೆ.

ಉತ್ಪಾದಕರಿಗೆ ಬೋನಸ್ ನೀಡಿಲ್ಲ ಕೂಡಲೇ ರೈತರ ಖಾತೆಗೆ ಹಣವನ್ನು ಜಮೆ ಮಾಡಬೇಕು. ಸಂಘದಲ್ಲಿ ಕಾನೂನು ಉಲ್ಲಂಘನೆ ಮಾಡಿರುವ ಕಾರ್ಯದರ್ಶಿಯ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಕೆಲಸದಿಂದ ವಜಾ ಮಾಡಬೇಕು. ಹೊಸದಾಗಿ ಕಾರ್ಯದರ್ಶಿಯನ್ನು ನೇಮಕ ಮಾಡಬೇಕು ಹಾಗೂ ಕಮಿಟಿ ರಚನೆ ಮಾಡಿ ಚುನಾವಣೆಯನ್ನು ಮಾಡಬೇಕು ಎಂದು ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರು ಹಾಗೂ ಹಾಲು ಉತ್ಪಾದಕರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು