News Karnataka Kannada
Sunday, April 28 2024
ಮೈಸೂರು

ಚಾಮುಂಡಿ ಬೆಟ್ಟಕ್ಕೆ ಇಂದು ಭಕ್ತರಿಗೆ ನಿರ್ಬಂಧ

Devotees to visit Chamundi Hill to remain closed today
Photo Credit : News Kannada

ಮೈಸೂರು: ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಇನ್ನೆರಡು ದಿನ ಮಾತ್ರ ಬಾಕಿ ಉಳಿದಿದೆ. ಇದರ ಮಧ್ಯೆ ಮೈಸೂರಿನಲ್ಲಿ ಮಹಿಷ ದಸರಾ, ಚಾಮುಂಡಿಬೆಟ್ಟ ಚಲೋ ವಾಕ್ ಭಕ್ತರಿಗೆ ಸಂಕಷ್ಟ ತಂದೊಡ್ಡಿದೆ.

ಮೈಸೂರಿನಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಇಂದು(ಅ.13) ಬೆಳಗ್ಗೆ 6 ಗಂಟೆಯಿಂದಲೇ ಚಾಮುಂಡಿಬೆಟ್ಟಕ್ಕೆ ಭಕ್ತರಗೆ ನಿಷೇಧಿಸಲಾಗಿದೆ. ಚಾಮುಂಡಿಬೆಟ್ಟದ ಬಳಿ ಮೂವರು ಸಬ್‌ಇನ್ಸ್​ಪೆಕ್ಟರ್, ಎಎಸ್‌ಐ ಮಹಿಳಾ ಕಾನ್ಸ್​ಟೇಬಲ್ ಸೇರಿ 25ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ʼಅಕ್ಟೋಬರ್ 13 ಚಾಮುಂಡಿಬೆಟ್ಟದಲ್ಲಿ ಮಹಿಷ ದಸರಾ ಆಚರಿಸಲು ಅನುಮತಿ ನೀಡಬೇಕು ಎಂದು ಮಹಿಷ ದಸರಾ ಆಚರಣಾ ಸಮಿತಿ ಪೊಲೀಸರಿಂದ ಅನುಮತಿ ಕೇಳಿತ್ತು. ಆದ್ರೆ, ಪೊಲೀಸರು ಅನುಮತಿ ನೀಡಿರಲಿಲ್ಲʼ. ಈಗ, ಮಹಿಷ ಉತ್ಸವ ಎಂಬ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಲು ಅನುಮತಿ ನೀಡಲಾಗಿದೆ. ಹೀಗಾಗಿ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರಿಗೆ ನಿಷೇಧ ಹಾಕಲಾಗಿದೆ. ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6ರವರೆಗೆ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು