ಮೈಸೂರು: ಪ್ರಶಾಂತ ಸಂಬರ್ಗಿ ವಿರುದ್ಧ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐ ಆರ್ ದಾಖಲಾಗಿದ್ದು, ಕುಂಭಮೇಳದಲ್ಲಿ ನಟ ಪ್ರಕಾಶ್ ರೈ ಸ್ನಾನ ಮಾಡುತ್ತಿರುವ ರೀತಿಯ ಫೋಟೊ ವೈರಲ್ ಮಾಡಿದ್ದಾರೆ. ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ನೀಡಿ ಎಫ್ ಐ ಆರ್ ಮಾಡಿಸಿದ್ದೇನೆ.
ಕುಂಭಮೇಳದ ಪುಣ್ಯ ಸ್ನಾನ ದೇಶದಲ್ಲಿ ನಡೆಯುತ್ತಿದೆ. ಹಿಂದು ಧರ್ಮದವರಿಗೆ ಹಾಗೂ ದೇವರನ್ನ ನಂಬುವವರಿಗೆ ಪುಣ್ಯವಾದ ಸ್ಥಳ. ಎಐ ಆ್ಯಪ್ ಬಳಿಸಿ ಪ್ರಕಾಶ್ ರೈ ಕುಂಭಮೇಳದಲ್ಲಿ ಸ್ನಾನ ಮಾಡಿದ್ರ ಎಂದು ಫೋಟೊ ವೈರಲ್ ಮಾಡುತ್ತಿದ್ದಾರೆ. ಅಂತಹ ಪುಣ್ಯದ ಸ್ನಾನ ನಡೆಯಬೇಕದಾರೇ ಅದರಲ್ಲಿ ರಾಜಕಾರಣ ನಡೆಯುತ್ತಿದೆ. ಮೊದಲಿನಿಂದಲೂ ಪ್ರಕಾಶ್ ರೈ ಹಿಂದು ವಿರೋಧಿ ಎಂದು ಸುಳ್ಳು ಸುದ್ದಿಯನ್ನ ಹಬ್ಬಿಸಿಕೊಂಡು ಬಂದಿದ್ದಾರೆ.
ಪ್ರಶಾಂತ ಸಂಬರ್ಗಿ ಪ್ರಖ್ಯಾತರೋ ಕುಖ್ಯಾತರೊ ಗೊತ್ತಿಲ್ಲ ನನಗೆ. ದೇಶದಲ್ಲಿ ಸುಳ್ಳು ಸುದ್ದಿಗಳನ್ನ ಹಬ್ಬಿಸುವುದು ಅಭ್ಯಸವಾಗಿ ಬಿಟ್ಟಿದೆ. ಇದನ್ನ ಯಾರು ಪ್ರಶ್ನೆ ಮಾಡುತ್ತಿಲ್ಲ. ದ್ವೇಷವನ್ನ ಹರಡಿಸುತ್ತಿದ್ದಾರೆ. ಇವರು ನಿಜವಾದ ಧರ್ಮದವರಲ್ಲ. ಜನರ ನಂಬಿಕೆಗೆ ಅಘಾತ ಮಾಡುತ್ತಿದ್ದಾರೆ. ನನ್ನ ವಿರುದ್ಧ ಸಾಕಷ್ಟು ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಅವರ ಮೇಲೆ ಕೇಸ್ ಹಾಕಿ ಗೆದಿದ್ದೇನೆ.
ಈಗಾಗಿ ನಾನು ಪ್ರಶಾಂತ ಸಂಬರ್ಗಿ ವಿರುದ್ಧ ದೂರು ನೀಡಿ ಎಫ್ ಐಆರ್ ಮಾಡಿಸಿದ್ದೇನೆ 15 ದಿನಗಳಲ್ಲಿ ಆ ವ್ಯಕ್ತಿ ಠಾಣೆಗೆ ಬಂದು ಉತ್ತರ ನೀಡಬೇಕು. ಸತ್ಯಾತ್ಯತೆ ಎಲ್ಲರಿಗೂ ತಿಳಿಯಬೇಕು. ಫೇಕ್ ನ್ಯೂಸ್ ಸಮಾಜವನ್ನ ಹಾಳು ಮಾಡುತ್ತಿದೆ. ಮೈಸೂರಿನಲ್ಲಿ ಬಹುಭಾಷ ನಟ ಪ್ರಕಾಶ್ ರೈ ಹೇಳಿಕೆ ನೀಡಿದರು.
ಯುವಕ ಯುವತಿಯರಿಗೆ ಪಾಠ ಆಗಬೇಕು. ಪ್ರಶಾಂತ್ ಸಂಬರ್ಗಿ ಇದೇ ರೀತಿ ಸಾಕಷ್ಟು ಜನರಿಗೆ ತೊಂದರೆ ಕೊಟ್ಟಿದ್ದಾನೆ. ಹಿಂದೆ ನಟಿಯರಿಗೆ ತೊಂದರೆ ಕೊಟ್ಟಿದ್ದಾನೆ. ಈ ಮನುಷ್ಯನಿಗೆ ಒಂದು ಪಾಠ ಕಲಿಸಿಬೇಕು. ತಪ್ಪು ಪ್ರಚಾರ ಮಾಡುವುದು ಅನುಮತಿ ಇಲ್ಲದೆ ಯಾರು ಫೋಟೊ ಗಳನ್ನ ಬಳಸಬಾರದು. ಇದು ಅಕ್ಷಮ್ಯ ಅಪರಾಧ. ನ್ಯಾಯದ ಬಗ್ಗೆ ನಿಜವಾದ ಬಗ್ಗೆ ಗಂಭೀರವಾಗಿ ಯೋಚನೆ ಮಾಡುತ್ತಿದ್ದೇನೆ.
ಕುಂಭಮೇಳೆ ಪುಣ್ಯ ಸ್ನಾನ ವಿಚಾರವಾಗಿ, ಸ್ನಾನ ಮಾಡುವುದರಲ್ಲಿ ತಪ್ಪೇನಿದೆ. ಅದು ಅವರ ನಂಬಿಕೆ. ನನಗೆ ದೇವರ ಮೇಲೆ ನಂಬಿಕೆ ಇಲ್ಲ. ನನಗೆ ಮನ್ಯುಷ್ಯರ ಮೇಲೆ ನಂಬಿಕೆ. ದೇವರಿಲ್ಲದೆ ಬದುಕಬಹುದು ಆದರೆ ಮನುಷ್ಯರಿಲ್ಲದೆ ಬದುಕಲು ಸಾಧ್ಯವಿಲ್ಲ. ಹಾಗಂತ ಅವರ ನಂಬಿಕೆಯನ್ನ ಪ್ರಶ್ನೆ ಮಾಡಲ್ಲ. ಅದನ್ನ ರಾಜಕಾರಣಕ್ಕೆ ಬಳಸಿಕೊಳ್ಳುವುದು ತಪ್ಪು.
ಕಾಂಗ್ರೆಸ್ ಟೀಕೆ ಮಾಡುವ ವಿಚಾರವಾಗಿ ಮಾತನಾಡಿ, ಅವರವರ ಭಾವಕ್ಕೆ ಅವರ ಭಕ್ತಿಗೆ ಹೇಳುತ್ತಾ ಹೋಗಲಿ. ನಾನು ಯಾರ ಬಗ್ಗೆಯೂ ಮಾತನಾಡಲ್ಲ. ನನಗೆ ಯಾವ ನಂಬಿಕೆಯ ಬಗ್ಗೆ ಟೀಕೆ ಮಾಡಲ್ಲ. ನನ್ನ ಹೆಂಡತಿ ಮಗಳು ದೇವಸ್ಥಾನಕ್ಕೆ ಹೋಗಿ ಹೋಮ ಮಾಡುತ್ತಾರೆ. ಆದರೆ ಇಬ್ಬರು ಸಾಮರಸ್ಯದಿಂದ ಇದ್ದೇವೆ. ಮೂಡ ನಂಬಿಕೆಯನ್ನ ಮಾತ್ರ ಪ್ರಶ್ನೆ ಮಾಡುತ್ತೇನೆ ಎಂದರು.
ನಾನು ಕ್ರಿಶ್ಚಿಯನ ಕ್ಕಿಂತ ದೊಡ್ಡ ಮಾಫಿಯಾ ಇನ್ನೊಂದು ಇಲ್ಲ. ಮುಸ್ಲೀಂರಲ್ಲಿ ದೊಡ್ಡ ಟೆರೆರಿಸ್ಟ್ ಗಳು ಇದ್ದಾರೆ ಎಂದು ಹೇಳಿದ್ದೇನೆ. ಅದು ಹೈಲೆಟ್ ಆಗಲ್ಲ. ನಾನು ಯಾವತಾದ್ದರೂ ಧರ್ಮದ ಬಗ್ಗೆ ಮಾತನಾಡಿದ್ದೀನಾ. ಧರ್ಮ ಧರ್ಮದ ಮೇಲೆ ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಇದೇ ಅವರ ಕೆಲಸ. ಸಂಬರ್ಗಿ ಯಾರು ಅಂತನೇ ಗೊತ್ತಿಲ್ಲ ಮೈಸೂರಿನಲ್ಲಿ ಬಹುಭಾಷ ನಟ ಪ್ರಕಾಶ್ ರೈ ಹೇಳಿಕೆ ನೀಡಿದ್ದಾರೆ.