News Karnataka Kannada
Friday, May 10 2024
ಮೈಸೂರು

ಮೈಸೂರು: ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ತರಬೇತಿಗೆ ಚಾಲನೆ

Untitled 2 Recovered Recovered Recovered
Photo Credit :

ಮೈಸೂರು: ಜ್ಞಾನಬುತ್ತಿ ಸಂಸ್ಥೆ ಹಮ್ಮಿಕೊಂಡಿರುವ 40 ದಿನಗಳ ಯುಜಿಸಿ-ನೆಟ್ ಮತ್ತು ಕೆ-ಸೆಟ್ ಸ್ಪರ್ಧಾತ್ಮಕ ಪರೀಕ್ಷಾ ಉಚಿತ ತರಬೇತಿಗೆ ಚಾಲನೆ ನೀಡಲಾಯಿತು.

ಮೈಸೂರಿನ ಲಕ್ಷ್ಮೀಪುರಂ ಸರ್ಕಾರಿ  ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಆವರಣದಲ್ಲಿ ನಡೆಯುತ್ತಿರುವ ತರಬೇತಿ ಕಾರ್ಯಕ್ರಮವನ್ನು ಎನ್‌ಸಿಇಆರ್‌ಟಿಯ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಪ್ರೊ. ಎನ್.ಎನ್. ಪ್ರಹ್ಲಾದ್ ಉದ್ಘಾಟಿಸಿ,  ಮಾತನಾಡಿ, ವಿದ್ಯಾರ್ಥಿಗಳು ಸರಿಯಾದ ಜ್ಞಾನವನ್ನು ಸಂಪಾದಿಸುವುದು ಅವರ ಮಾನಸಿಕ ಸಾಮರ್ಥ್ಯಗಳನ್ನು ಸುಧಾರಿಸುವಲ್ಲಿ ಬಹಳ ದೂರ ಸಾಗುತ್ತದೆ. ಮಾಹಿತಿ ಸಂಸ್ಸರಣೆಯ ಮೂಲಕ ಜ್ಞಾನವನ್ನು ಪಡೆಯಬೇಕು.

ಶಿಕ್ಷಣದ ಎಲ್ಲಾ ಹಂತಗಳಲ್ಲಿ ಶಿಕ್ಷಕರು ಸರಿಯಾದ ಜ್ಞಾನವನ್ನು ಪಡೆಯಲು ಪ್ರಕ್ರಿಯೆಗೊಳಿಸಬೇಕಾದ ಮಾಹಿತಿಯನ್ನು ಒದಗಿಸುತ್ತಾರೆ. ಜ್ಞಾನದ ಸಂಸ್ಕರಣೆಯಿಂದ ಬುದ್ದಿವಂತಿಕೆಯನ್ನು ಪಡೆಯಬಹುದು ಇದು ಪ್ರತಿಯೊಬ್ಬರು ಸಕಾರಾತ್ಮಕವಾಗಿ ಯೋಚಿಸಲು ಮತ್ತು ಶಿಕ್ಷಣ ವ್ಯವಸ್ಥೆಯನ್ನು ಸರಿಯಾದ ಮಾರ್ಗದಲ್ಲಿ ನಡೆಸಲು ಅವಶ್ಯಕವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆ ಉಪ ಆಯುಕ್ತೆ, ಪ್ರಸ್ತುತ ಆಡಳಿತ ತರಬೇತಿ ಸಂಸ್ಥೆಯಲ್ಲಿ ಸಂಪನ್ಮೂಲ ವ್ಯಕ್ತಿ ಎ.ಜೆ. ಶ್ರೀವಲ್ಲಿ ಮಾತನಾಡಿ ಪರೀಕ್ಷೆಗಳನ್ನು ಬೇಧಿಸಲು ಬಯಸುವ ಅಭ್ಯರ್ಥಿಗಳು ಬಹುಆಯ್ಕೆಯ ಪ್ರಶ್ನೆ ಪತ್ರಿಕೆಯಲ್ಲಿ ನೂರರಷ್ಟು ತಯಾರಿ ನಡೆಸಬೇಕು. ಯುಜಿಸಿ ನೆಟ್ ಪಠ್ಯಕ್ರಮದ ಆಧಾರದ ಮೇಲೆ ಸರಿಯಾದ ತರಬೇತಿ ಕಲಿಕೆಯ ಸಂಪನ್ಮೂಲಗಳನ್ನು ಆಯ್ಕೆ ಮಾಡುವುದು, ಪರೀಕ್ಷೆಯ ಮಾದರಿಯನ್ನು ಅನುಸರಿಸಲು ಗಮನ ಕೊಡುವುದು ಪರೀಕ್ಷಾ ತಯಾರಿಯ ಪ್ರಮುಖ ಭಾಗವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಆಡಳಿತ ತರಬೇತಿ ಸಂಸ್ಥೆಯ ಡಾ. ಹೆಚ್.ಎಸ್. ಯೋಗೇಶ್, ರೋಹನ್ ರವಿಕುಮಾರ್, ಪ್ರೊ. ವಿ.ಜಯಪ್ರಕಾಶ್, ಜೈನಹಳ್ಳಿ ಸತ್ಯನಾರಾಯಣಗೌಡ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು