ಮೈಸೂರು: ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದ ಸಂತಾನ ಗಣಪತಿ ಕಲ್ಯಾಣ ಮಂಟಪದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ನಾಳೆ ಮಂಗಳವಾರ ಬೃಹತ್ ಚುನಾವಣಾ ಪ್ರಚಾರ ಸಭೆಯನ್ನು ನಡೆಸಲು ಇಂದು ಸೋಮವಾರ ಸಂಜೆ 5:00 ಸಮಯದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಅವರ ಪರವಾಗಿ ಬೃಹತ್ ಚುನಾವಣಾ ಪ್ರಚಾರವನ್ನು ನಡೆಸಲು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ, ಕೆ.ವೆಂಕಟೇಶ್, ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್, ಕೃಷ್ಣಮೂರ್ತಿ, ಅನಿಲ್ ಚಿಕ್ಕಮಾದು, ಗಣೇಶ್ ಪ್ರಸಾದ್, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ.
ಈ ಹಿನ್ನಲೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಭಾಗವಹಿಸಿದ್ದರು.