News Karnataka Kannada
Friday, May 03 2024
ಮೈಸೂರು

ಎಚ್.ಡಿ.ಕೋಟೆ: ಮೇಟಿಕುಪ್ಪೆ ವನ್ಯಜೀವಿ ವಲಯದಲ್ಲಿ ಕಾಡಾನೆ ದಾಳಿಗೆ ವಾಚರ್ ಬಲಿ

Watchman killed in wild elephant attack in Metikuppe wildlife range
Photo Credit : By Author

ಎಚ್.ಡಿ.ಕೋಟೆ: ನಾಡಿಗೆ ಬಾರದಂತೆ ಕಾವಲು ಕಾಯುತ್ತಿದ್ದ ಅರಣ್ಯ ಇಲಾಖೆ ವಾಚರ್ ಕಾಡಾನೆ ದಾಳಿಗೆ ತುತ್ತಾಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಮೇಟಿಕುಪ್ಪೆ ವನ್ಯಜೀವಿ ವಲಯದಲ್ಲಿ ಕಳೆದ ಡಿ.31ರ ಶನಿವಾರ ರಾತ್ರಿ ಮೇಟಿಕುಪ್ಪೆ ವನ್ಯಜೀವಿ ವಲಯದ ದಟ್ಟಹಳ್ಳ ಗೇಟ್ ಬಳಿ ನಡೆದಿದೆ.

ತಾಲೂಕಿನ ಭೀಮನಕೊಲ್ಲಿ ಗ್ರಾಮ ಸಮೀಪದ ಸೋಮದೇವರಮುಂಟಿ ಗ್ರಾಮದ ನಿವಾಸಿ ಮಹದೇವಸ್ವಾಮಿ(43) ಮೃತ ದುರ್ದೈವಿ.ಇವರು ಪತ್ನಿ ಒಬ್ಬ ಪುತ್ರ, ಒಬ್ಬ ಪುತ್ರಿ ಇದ್ದಾರೆ.

ಇತ್ತೀಚಿಗೆ ಕಾಡಿನಿಂದ ಟ್ರಂಚ್ ದಾಟಿ ನಾಡಿಗೆ ಬರುವ ಕಾಡಾನೆಗಳು ಕಾಡಂಚಿನ ಗ್ರಾಮಗಳಲ್ಲಿ ರೈತರು ತಮ್ಮ ಹೊಲ ಗದ್ದೆಗಳಲ್ಲಿ ಬೆಳೆದಿರುವ ಬೆಳೆಗಳನ್ನು ತಿಂದು ತುಳಿದು ಹಾಳುಮಾಡಿ ನಷ್ಟ ಮಾಡುತ್ತಿರುವುದನ್ನು ತಪ್ಪಿಸುವ ಸಲುವಾಗಿ ಮೇಟಿಕುಪ್ಪೆ ವನ್ಯಜೀವಿ ವಲಯದಲ್ಲಿ ರಾತ್ರಿ ಪಾಳಿಯ ಕಾವಲು ಹೆಚ್ಚಿಸಲಾಗಿದ್ದು, ಅದರಂತೆ ಕಳೆದ ರಾತ್ರಿ ಮೃತ ಮಹದೇವಸ್ವಾಮಿ ಸೇರಿದಂತೆ ಮೂವರು ವಾಚರ್ ಗಳು ದಟ್ಟಹಳ್ಳ ಗೇಟ್ ಬಳಿ ಬೆಂಕಿ ಹಾಕಿಕೊಂಡು ಕಾವಲು ಕಾಯುತ್ತಿದ್ದಾಗ ಆನೆ ದಿಢೀರ್ ದಾಳಿ ಮಾಡಿದೆ. ಈ ವೇಳೆ ಮೂವರು ವಾಚರ್ ಶುಂಠಿ ಜಮೀನಿನಲ್ಲಿ ತಪ್ಪಿಸಿಕೊಂಡು ಓಡುವ ವೇಳೆ ಮಹದೇವಸ್ವಾಮಿ ಆಯತಪ್ಪಿ ಬಿದ್ದ ಕೂಡಲೇ ಆನೆ ದಾಳಿ ಮಾಡಿ ತುಳಿದು ಸಾಯಿಸಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತ ಮಹದೇವಸ್ವಾಮಿ ಕುಟುಂಬಕ್ಕೆ ಇಲಾಖೆ ಕಡೆಯಿಂದ ಸೂಕ್ತ ಪರಿಹಾರ ಮತ್ತು ಕುಟುಂಬದ ಒಬ್ಬರಿಗೆ ಕೆಲಸ ನೀಡುವುದಾಗಿ ಭರವಸೆ ನೀಡಿದ ನಂತರ ಮೃತದೇಹವನ್ನು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ಹಸ್ತಾಂತರ ಮಾಡಲಾಯಿತು. 5ಲಕ್ಷ ರೂ.ಗಳ ಪರಿಹಾರ ಮೊತ್ತವನ್ನು ವಿತರಿಸಲಾಯಿತು.

ಶಾಸಕ ಅನಿಲ್ ಚಿಕ್ಕಮಾದು, ನಾಗರಹೊಳೆ ಡಿಸಿಎಫ್ ಡಾ.ಹರ್ಷಕುಮಾರ್ ಚಿಕ್ಕನರಗುಂದ, ಎಸಿಎಫ್ ಕೆ.ಎನ್.ರಂಗಸ್ವಾಮಿ, ಆರ್ ಎಫ್ ಓ ಸಿದ್ದರಾಜು ಇನ್ನಿತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು