ಹಾಸನ: ಗಂಡು ಕರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಗೂಡ್ಸ್ ವಾಹನ ಹಳೇಬೀಡಿನ ದ್ಯಾವಪ್ಪನಹಳ್ಳಿ ತಿರುವಿನಲ್ಲಿ ಬುಧವಾರ ರಾತ್ರಿ ಪಲ್ಟಿ ಹೊಡೆದ ಪರಿಣಾಮ 18 ಕರುಗಳು ಸ್ಥಳದಲ್ಲಿಯೇ ಮೃತಪಟ್ಟಿವೆ.
ಸಣ್ಣಪುಟ್ಟ ಗಾಯಗಳೊಂದಿಗೆ ಬದುಕಿರುವ 23 ಕರುಗಳನ್ನು ಮತ್ತೊಂದು ವಾಹನದಲ್ಲಿ ಸಾಗಿಸಿ ಲಿಂಗಪ್ಪನ ಕೊಪ್ಪಲು ಸರ್ಕಾರಿ ಶಾಲೆ ಆವರಣದಲ್ಲಿ ಆರೈಕೆ ಮಾಡಲಾಗುತ್ತಿದೆ.
ಅಪಘಾತದ ಬಳಿಕ ಚಾಲಕ ಮತ್ತು ಜತೆಯಲ್ಲಿದ್ದವರು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಅತಿವೇಗವಾಗಿ ಚಲಿಸುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ.