ಹಾಸನ: ಜೆಡಿಎಸ್ ಪಕ್ಷದ ನಗರಸಭೆ ಸದಸ್ಯ ಪ್ರಶಾಂತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಹಾಸನ ನಗರದ 16 ನೇ ವಾರ್ಡ್ ಶಾಂತಿನಗರದ ಜೆಡಿಎಸ್ ನಗರಸಭಾ ಸದಸ್ಯ ಪ್ರಶಾಂತ್ ತಮ್ಮ ಮನೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ನಗರದ ಜವೇನಹಳ್ಳಿ ಮಠದ ಸಮೀಪ ಆಟೋದಲ್ಲಿ ಹಿಂಬಾಲಿಸಿಕೊಂಡು ಬಂದ ಹಂತಕರು ಅಡ್ಡಗಟ್ಟಿ ಮನಸೋಯಿಚ್ಛೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.
ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಶಾಂತ್ ನಾಗರಾಜ್ ಕೊಲೆ ಪ್ರಕರಣದಲ್ಲಿ ಪೂರ್ಣಚಂದ್ರ ಹಾಗೂ ಅರುಣ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.