News Karnataka Kannada
Saturday, May 04 2024
ಹಾಸನ

ಪಿಎಸ್ಐ ಅಕ್ರಮ ಪ್ರಕರಣ : ತಂದೆ ಮಗ ಸೇರಿ ಮೂವರ ಬಂಧನ

Untitled 157
Photo Credit :

ಹಾಸನ: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ-ಮಗ ಸೇರಿದಂತೆ ಮೂವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಹಾಸನ ಜಿಲ್ಲೆ ಶ್ರವಣಬೆಳಗೊಳ ತಾಲೂಕು ಗ್ರಾಮ ಪಂಚಾಯಿತಿ ಸದಸ್ಯ ಕೇಶವ ಮತ್ತು ಅದೇ ಗ್ರಾಮದ ನಾರಾಯಣಪ್ಪ ಹಾಗೂ ಪಿಎಸ್‌ಐ ನೇಮಕಾತಿಯಲ್ಲಿ ಆಯ್ಕೆಯಾಗಿರುವ ನಾರಾಯಣಪ್ಪನ ಮಗ ವೇಣುಗೋಪಾಲ ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಕೇಶವ ತಮಗೆ ಆತ್ಮೀಯರಾಗಿದ್ದ ನಾರಾಯಣಪ್ಪನ ಮಗನನ್ನು ಪಿಎಸ್‌ಐ ಮಾಡಲು ಡೀಲ್ ಕುದುರಿಸಿದ್ದರು. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಮಾಹಿತಿ ಆಧರಿಸಿ ಇವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೇಶವ ಅವರ ಸಂಬಂಧಿಕರು ಪೊಲೀಸ್ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಮೂಲಕ ಡೀಲ್ ಕುದುರಿಸಿಕೊಂಡು ವೇಣುಗೋಪಾಲ್ ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿದ್ದ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು