ಹಾಸನ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರಿಗೆ ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಈ ಕುರಿತು ಹಾಸನದಲ್ಲಿ ಸೋಮವಾರ ಸುದ್ದಿಗಾರೊಂದಿಗೆ ಮಾತನಾಡಿದ ಮಾಜಿ ಸಚಿವ ಎಚ್.ಡಿ.ರೇವಣ್ಣ, ನಮ್ಮ ತಾಯಿಗೆ ಐಟಿ ಅಧಿಕಾರಿಗಳಿಂದ ನೋಟಿಸ್ ಬಂದಿದೆ.
ಒಬ್ಬ ಮಾಜಿ ಪ್ರಧಾನಿ ಪತ್ನಿಗೆ ಹೀಗೆ ಮಾಡ್ತಾರಾ? ದೊಡ್ಡಪುರದ ಬಳಿ ನಮ್ಮ ತಾಯಿ ಹೆಸರಿನ ಜಮೀನಿನಲ್ಲಿ ಕಬ್ಬು ಬೆಳೆದಿದ್ದೀವಿ. ನಮ್ಮ ತಾಯಿಗೆ ಸೇರಿದ ಗದ್ದೆಯಲ್ಲಿ ಕಬ್ಬು ಬೆಳೆದಿದ್ದಕ್ಕೆ ಐಟಿ ನೋಟಿಸ್ ಜಾರಿ ಮಾಡಿದೆ. ಐಟಿ ಅಧಿಕಾರಿಗಳು ಬಂದು ನೋಡ್ಬೇಕು ನಾವು ಎಷ್ಟು ಬೆಳೀತೀವಿ ಅಂತ. ನಮ್ಮ ಜಮೀನನ್ನು ಜಿಲ್ಲಾಧಿಕಾರಿಗಳೇ ಬಂದು ಅಳೆಯಲಿ. ಅಧಿಕಾರಿಗಳು ನೂರಾರು ಕೋಟಿ ಮಾಡುತ್ತಿದ್ದಾರೆ. ಆರ್ಟಿಒ ಅಧಿಕಾರಿಗಳು 200 ಕೋಟಿ ರೂ. ಮಾಡ್ತಿದ್ದಾರೆ. ಅವರನ್ನ ಬಿಟ್ಟು ಓರ್ವ ಮಾಜಿ ಪ್ರಧಾನಿ ಮನೆಗೆ ನೋಟಿಸ್ ಕೊಟ್ಟಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.
ನಾನು ಹಣ ಮಡೋದಾದ್ರೆ, ಆಸ್ತಿ ಮಾಡೋದಾದ್ರೆ ಹಾಸನದಲ್ಲಿ ಎಷ್ಟು ಬೇಕಾದ್ರೂ ಮಾಡಬಹುದಿತ್ತು. ಅಂತಹ ಕೆಲಸ ನಾನು ಮಾಡಿಲ್ಲ. ನಾನು ದ್ವೇಷದ ರಾಜಕಾರಣ ಮಾಡಿಲ್ಲ. ಐಟಿ ನೋಟಿಸ್ಗೆ ಉತ್ತರ ಕೊಡ್ತೀವಿ. ಆದರೆ ಆರ್ಟಿಒ ಆಫೀಸರ್ ನೂರು-ಇನ್ನೂರು ಕೋಟಿ ರೂ. ಮಾಡಿದ್ದಾರೆ. ಅವರಿಗೇಕೆ ನೋಟಿಸ್ ಕೊಟ್ಟಿಲ್ಲ? ನಮ್ಮ ಗದ್ದೆಗೆ ಬಂದು ಕಬ್ಬಿನ ಬೆಳೆ ನೋಡಿ ಎಂದು ಐಟಿ ಅಧಿಕಾರಿಗಳಿಗೆ ಹೇಳಿದ್ದೀವಿ. ಕಬ್ಬು ಕಟಾವು ಮಾಡಿದ ಮೇಲೆ ಬೆಳೆ ಎಲ್ಲಿ ಅನ್ನೋದು ಬೇಡ ಎಂದರು.
ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…
ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್ ಸುಕೇಶ್…
ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದ ಘಟನೆ…
ಇತ್ತೀಚೆಗೆ ದೇಶದಾದ್ಯಂತ ಬಾಂಬ್ ಬೆದರಿಕೆ ಕೇಳಿಬರುತ್ತವೆ ಇದರ ಹಿಂದೆ ಯಾರ ಕೈಚಳಕವಿದೆ ಎಂದು ಇನ್ನು ಬೆಳಕಿಗೆ ಬಂದಿಲ್ಲ. ಈಗಾಗಲೇ ಶಾಲೆಗಳಿಗ,…
ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ.
ಪತಂಜಲಿಯ ನವರತ್ನ ಇಲೈಚಿ ಸೋನ್ ಪಾಪ್ಡಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ನಂತರ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಅಧಿಕಾರಿ ಮತ್ತು ಇತರ…