Categories: ಹಾಸನ

ರಸ್ತೆ ದುರಸ್ತಿಗಾಗಿ ಬಸ್ ತಡೆದು ಪ್ರತಿಭಟನೆ

ಬೇಲೂರು: ಹಲವು ವರ್ಷಗಳಿಂದ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನಗಳು ಸಂಚರಿಸಲಾಗದಂತಹ ದುಸ್ಥಿತಿಗೆ ತಲುಪಿದ್ದರೂ ದುರಸ್ತಿ ಮಾಡದ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಬಸ್ ತಡೆದು ಪ್ರತಿಭಟನೆ ನಡೆಸಿರುವ ಘಟನೆ ತಾಲೂಕಿನ ಬಿಕ್ಕೋಡು ಹೋಬಳಿಯ ಬಿಳಗುಲಿ ಗ್ರಾಮದಲ್ಲಿ  ನಡೆದಿದೆ.

ಕೋಗಿಲೆಮನೆ- ಮದಘಟ್ಟ- ಪಡುವಳಲು ಮಾರ್ಗವಾಗಿ ಪ್ರತಿನಿತ್ಯ ಸಾವಿರಾರು ವಿದ್ಯಾರ್ಥಿಗಳು ಹಾಗೂ ರೈತರು ದಿನನಿತ್ಯ ಕೆಲಸ ಕಾರ್ಯಗಳಿಗೆ ಇದೇ ಮಾರ್ಗವಾಗಿ ತೆರಳಬೇಕು.ಆದರೆ ಸುಮಾರು ಐದಾರು ವರ್ಷಗಳಿಂದ ರಸ್ತೆ ಸಂಪೂರ್ಣ ಹಾಳಾಗಿ ಗುಂಡಿಬಿದ್ದಿದ್ದರೂ ಸಹ ಜನಪ್ರತಿನಿಧಿಗಳಾಗಲಿ, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಾಗಲಿ ಈ ಬಗ್ಗೆ ಗಮನ ಹರಿಸಿಲ್ಲ ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಧಿಕ್ಕಾರ ಕೂಗಿ ಪ್ರತಿಭಟಿಸಿದರು.

ಈ ವೇಳೆ   ಗ್ರಾಮಪಂಚಾಯತಿ ಸದಸ್ಯ ಕವೀಶ್ ಹಾಗೂ ಗ್ರಾಮಸ್ಥರಾದ ಮಲ್ಲಿಕ್ ಅವರು, ಮಾತನಾಡಿ ‘ಮಳೆಗಾಲ ಬಂತೆಂದರೆ ರಸ್ತೆಗಳು ಸಂಪೂರ್ಣ ಹಾಳಾಗುತ್ತವೆ. ಸುಮಾರು ಮೂರ್ನಾಲ್ಕು ಅಡಿಗಳಷ್ಟು ಗುಂಡಿ ಬಿದ್ದು ಸಂಪೂರ್ಣ ಹಾಳಾಗಿದೆ. ಹೀಗಾಗಿ ಈ ರಸ್ತೆ ಸರಿ ಇಲ್ಲ ಎಂದು ನೆಪವೊಡ್ಡಿ ಬಸ್ ಸಂಚಾರ ನಿಲ್ಲಿಸಲಾಗುತ್ತದೆ. ಅಲ್ಲದೆ ಖಾಸಗಿ ವಾಹನಗಳು ಈ ಭಾಗದಲ್ಲಿ  ಬರಲು ಹಿಂಜರಿಯುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಹಾಗೂ ವೃದ್ಧರಿಗೆ ತುಂಬಾ ತೊಂದರೆಯಾಗಿದೆ’ ಎಂದು ದೂರಿದರು.

ದ್ವಿಚಕ್ರ ವಾಹನ ಸವಾರರು ರಾತ್ರಿ ಸಮಯದಲ್ಲಿ ಗುಂಡಿಗಳನ್ನು ದಾಟಲು ಹೋಗಿ ಬಿದ್ದಂತ ಘಟನೆಗಳು ನಡೆದಿದೆ. ತಕ್ಷಣವೇ ಇದರ ಬಗ್ಗೆ ಅಧಿಕಾರಿಗಳು ಹಾಗೂ ಸ್ಥಳೀಯ  ಶಾಸಕರು  ಗಮನ ಹರಿಸಬೇಕು ಅಲ್ಲದೆ ಗ್ರಾಮಪಂಚಾಯತಿ ಸಭೆಗಳಲ್ಲೂ ಸಹ ಎಷ್ಟೋ ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಗಮನ ಹರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ತಕ್ಷಣವೇ ರಸ್ತೆ ಕಾಮಗಾರಿ ಮಾಡಬೇಕು ಇಲ್ಲದಿದ್ದರೆ ಮುಂಬರುವ ಚುನಾವಣೆಯಿಂದ ಈ ಗ್ರಾಮದ ಮತದಾರರು ದೂರ ಉಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದೇ ವೇಳೆ ವಕೀಲ ಕುಮಾರ್, ಚಂದ್ರಶೇಖರ್ ಧರಣಿ, ಲಿಂಗರಾಜು, ಜಯದೇವ್, ಆರಾಧ್ಯ, ಕಿಶೋರ್, ಬಿಳುಗುಲಿ, ಮದಘಟ್ಟ, ಮಾಳೇಗೆರೆ ಗ್ರಾಮಸ್ಥರು ಹಾಜರಿದ್ದರು.

Ashika S

Recent Posts

ಶಬ್ದ ಮಾಲಿನ್ಯದಿಂದ ನಿದ್ರೆಗೆ ಭಂಗ: ಹೃದಯಾಘಾತದ ಆತಂಕ ಹೆಚ್ಚಳ

ಇಂದು ಶಬ್ದ ಮಾಲಿನ್ಯ ಮಾತ್ರವಲ್ಲದೆ ಪ್ರತಿಯೊಂದು ಮಾಲಿನ್ಯವು ಪರಿಸರದ ಗುಣಮಟ್ಟಕ್ಕೆ ಮಾತ್ರವಲ್ಲದೆ ಮನುಷ್ಯನ ಜೀವನಕ್ಕೂ ಗಂಭೀರ ಅಪಾಯವಾಗಿದೆ. ಶಬ್ದ ಮಾಲಿನ್ಯವು…

18 mins ago

ಮಂಗಳೂರು: ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನ ಸಾಗಾಟ !

ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.…

37 mins ago

ಮತ್ತೊಂದು ದಾಖಲೆ ಬರೆದ ಕೂಲ್‌ ಕ್ಯಾಪ್ಟನ್ ಎಂ.ಎಸ್​. ಧೋನಿ

ಐಪಿಎಲ್ ಇತಿಹಾಸದಲ್ಲಿ ಕೂಲ್‌ ಕ್ಯಾಪ್ಟನ್ ಎಂ.ಎಸ್​. ಧೋನಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಕಳೆದ ದಿನ (ಏ.28) ಚೆನ್ನೈನ ಎಂ.ಎ. ಚಿದಂಬರಂ…

52 mins ago

ಎಷ್ಟು ದಿನ ಮುಸ್ಲಿಮರ ಬಗ್ಗೆ ಭಯ ಹುಟ್ಟಿಸುತ್ತೀರಿ: ಮೋದಿಗೆ ಓವೈಸಿ ಪ್ರಶ್ನೆ

ಮುಸ್ಲಿಮರು ಶೀಘ್ರದಲ್ಲೇ ಬಹುಸಂಖ್ಯಾತರಾಗುತ್ತಾರೆ ಎಂಬ ಭಯವನ್ನು ನರೇಂದ್ರ ಮೋದಿ ಇನ್ನೂ ಹಿಂದೂಗಳಲ್ಲಿ ಹರಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆಲ್ ಇಂಡಿಯಾಮಜ್ಲಿ ಸ್-ಎ-ಇತ್ತೆಹಾದುಲ್…

1 hour ago

ಛತ್ತೀಸ್‌ಗಢದಲ್ಲಿ ಭೀಕರ ರಸ್ತೆ ಅಪಘಾತ: 9 ಮಂದಿ ದುರ್ಮರಣ, 23 ಮಂದಿಗೆ ಗಾಯ

ಛತ್ತೀಸ್‌ಗಢದ ಬೆಮೆತಾರಾದ ಕಥಿಯಾ ಪೆಟ್ರೋಲ್ ಪಂಪ್ ಬಳಿ ಪಿಕಪ್ ಟ್ರಕ್ ರಸ್ತೆ ಬದಿ ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ…

2 hours ago

ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದ ಮಗು: ವಿಡಿಯೋ ವೈರಲ್‌

ತಮಿಳುನಾಡಿನ ಚೆನ್ನೈನ ಅವಡಿಯ ತಿರುಮಲ್ಲೈವೋವಲ್‌ನಲ್ಲಿರುವ  ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ಏಳು ತಿಂಗಳ ಮಗುವೊಂದು ವಿಂಡೋ ಪೋರ್ಚ್‌  ಮೇಲೆ ಬಿದ್ದ ಘಟನೆ ನಡೆದಿದೆ. 

2 hours ago