ಹಾಸನ : ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಡಾ. ಸೂರಜ್ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ಬಿಗಿ ರಿಲೀಫ್ ಕೊಟ್ಟಿದೆ. ಹಾಸನ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆ ಜೆಡಿಎಸ್ ಅಭ್ಯರ್ಥಿಯಾಗಿ ಸೂರಜ್ ಕಣಕ್ಕಿಳಿದಿದ್ದಾರೆ.
ಡಾ. ಸೂರಜ್ ರೇವಣ್ಣ ನಾಮಪತ್ರ ತಿರಸ್ಕಾರ ಮಾಡಬೇಕು, ವಿಧಾನ ಪರಿಷತ್ ಚುನಾವಣೆಗೆ ತಡೆ ನೀಡಬೇಕು ಎಂದು ಕೋರಿ ಕರ್ನಾಟಕ ಹೈಕೋರ್ಟ್ಗೆ ಸಲ್ಲಿಕೆಯಾಗಿದ್ದ ರಿಟ್ ಅರ್ಜಿ ವಜಾಗೊಳಿಸಲಾಗಿದೆ. ಸೋಮವಾರ ಈ ಕುರಿತು ಕೋರ್ಟ್ ಆದೇಶ ನೀಡಿದೆ.