News Karnataka Kannada
Saturday, April 27 2024
ಹಾಸನ

ಹಾಸನ: ಒಂಟಿ ಸಲಗದ ಮೃತದೇಹ ಪತ್ತೆ

Untitled 1
Photo Credit :

ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಗೂರ್ಗಿಹಳ್ಳಿ ಗ್ರಾಮದ ಬಳಿ ಕಾಡಾನೆಯೊಂದರ ಮೃತದೇಹ ಪತ್ತೆಯಾಗಿದೆ. ಸೈಯದ್ ಸತ್ತರೆ ಎಂಬುವರ ತೋಟದ ಸಮೀಪ 15 ವರ್ಷದ ಗಂಡು ಸಲಗ ಮೃತಪಟ್ಟಿದೆ.

ಆನೆಯ ಕಣ್ಣಿನ ಭಾಗದಲ್ಲಿ ಗುಂಡಿಕ್ಕಿರುವ ಕುರುಹು ಹಾಗೂ ದೇಹದ ಮೇಲೆ ರಕ್ತಸಿಕ್ತ ಗಾಯದ ಗುರುತುಗಳು ಪತ್ತೆಯಾಗಿದ್ದು, ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಬೇಲೂರು ತಾಲೂಕಿನ ಅರೆಹಳ್ಳಿ ಮಲಸಾವರ ಸುತ್ತಮುತ್ತ ಇತ್ತೀಚೆಗೆ 30ಕ್ಕೂ ಹೆಚ್ಚು ಆನೆಗಳು ಬೀಡು ಬಿಟ್ಟಿವೆ. ಇದರಿಂದ ಕಾಫಿ ತೋಟಕ್ಕೆ ಹೋಗಲು ಕೂಲಿಕಾರ್ಮಿಕರು ಭಯಪಡುವಂತಾಗಿದೆ. ಕೆಲ ದಿನಗಳಿಂದ ಅರಳಿ ಭಾಗದಲ್ಲಿ ಕಾಡಾನೆಗಳಿಗೆ ನಾಲ್ಕು ಮಂದಿ ಕಾರ್ಮಿಕರು ಬಲಿಯಾಗಿದ್ದಾರೆ. ಇದೀಗ ಅದೇ ಭಾಗದಲ್ಲಿ ಕಾಡಾನೆ ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇತ್ತೀಚೆಗೆ ಆನೆ ಹಾವಳಿ ಅತಿಯಾಗಿರುವ ಹಿನ್ನೆಲೆಯಲ್ಲಿ ಸ್ಥಳಾಂತರ ಮಾಡಬೇಕೆಂದು ಜನರು ಶಾಸಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದರು. ಇದರ ಬೆನ್ನಲ್ಲೇ ಕಾಡಾನೆ ಸಾವು ಪ್ರಕರಣ ಬೆಳಕಿಗೆ ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು