ಹಾಸನ ( ಫೆ. 09) : ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಕಾವಲು ಹೊಸೂರಿನಲ್ಲಿ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಪತ್ತೆ ಮಾಡಿದ್ದು ಪ್ರೇಮಿ ಜೊತೆ ಸೇರಿ ಗಂಡನನ್ನೇ ಕೊಲ್ಲಿಸಿದ್ದ ಖತರ್ನಾಕ್ ಪತ್ನಿಯನ್ನು ಬಂಧಿಸಲಾಗಿದೆ.
ಜನವರಿ 31 ರಂದು ಮಕ್ಕಳನ್ನು ಶಾಲೆಯಿಂದ ಕರೆತರಲು ತೆರಳೊ ವೇಳೆ ಬೈಕ್ ಅಡ್ಡಗಟ್ಟಿ ಆನಂದ್ ಎಂಬುವರ ಹತ್ಯೆ ಮಾಡಲಾಗಿತ್ತು. ಕೊಲೆ ಮಾಡಿ ನನಗೇನು ಗೊತ್ತಿಲ್ಲ ಎನ್ನುತ್ತಿದ್ದವಳಿಂದ ಇದೀಗ ಪೊಲೀಸರು ಸತ್ಯ ಬಾಯಿ ಬಿಡಿಸಿದ್ದಾರೆ.
ಚನ್ನರಾಯಪಟ್ಟಣ ತಾಲ್ಲೂಕಿನ ಕಾವಲು ಹೊಸೂರು ಗ್ರಾಮದ ಆನಂದ್ (42) ಹತ್ಯೆಯಾಗಿತ್ತು. ಕೊಲೆ ಆರೋಪದಲ್ಲಿ ಪತ್ನಿ ಸುನಿತಾ ಹಾಗೂ ಆಕೆಯ ಪ್ರಿಯಕರನ ಬಂಧನವಾಗಿದೆ.
ಯೋಗ ಕ್ಲಾಸ್ ನಲ್ಲಿ ಪರಿಚಯವಾಗಿದ್ದ ನವೀನ ಜೊತೆ ಸುನಿತಾ ಲವ್ವಿ ಡವ್ವಿ ಶುರುಹಚ್ಚಿಕೊಂಡಿದ್ದಳು. ಗಂಡನಿಗೆ ವಿಚಾರ ಗೊತ್ತಾಗಿ ಆಡ್ಡಿಯಾಗುತ್ತಾನೆ ಎಂದು ಭಾವಿಸಿ ಗಂಡನನ್ನೇ ಹತ್ಯೆ ಮಾಡಿಸಿದ್ದಾಳೆ. ಬೆಂಗಳೂರಿನ ಇಬ್ಬರಿಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾಳೆ.
ನುಗ್ಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. 2014 ರಲ್ಲಿ ಡ್ರೈವಿಂಗ್ ಕಲಿಯಲು ಹೋಗಿ ಮಹಿಳೆ ಕೊಲೆ ಕೇಸ್ ನಲ್ಲಿ ಆರೋಪಿಯಾಗಿದ್ದ ಸುನಿತಾ ಈಗ ಗಂಡನ ಕೊಲೆ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾಳೆ. ಕೊಲೆ ಕೇಸ್ ನಲ್ಲಿ ಬಿಡುಗಡೆಯಾಗಿ ಮನೆಯಲ್ಲಿದ್ದ ವೇಳೆ ಇನ್ನೊಬ್ಬನ ಜೊತೆ ಸ್ನೇಹ ಬೆಳೆಸಿದ್ದಳು.