News Karnataka Kannada
Thursday, May 02 2024
ಹಾಸನ

ಹಿಜಾಬ್ ವಿವಾದದ ಹಿಂದೆ ರಾಷ್ಟ್ರೀಯ ಪಕ್ಷಗಳ ಕುತಂತ್ರ ಇದೆ; ಹೆಚ್.ಡಿ,ಕುಮಾರಸ್ವಾಮಿ 

Photo Credit :

ಹಾಸನ : ಹಿಜಾಬ್ ವಿಚಾರದಲ್ಲಿ  ನ್ಯಾಯಾಲಯದ ತೀರ್ಪು ಏನು ಬರುತ್ತದೋ ನೋಡೋಣ. ಆದರೆ, ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳ ಹೃದಯದಲ್ಲಿ ವಿಷ ತುಂಬುವ ಕೆಲಸವನ್ನು ಕೆಲವರು ವ್ಯವಸ್ಥಿತವಾಗಿ ಮಾಡುತ್ತಿದ್ದಾರೆ. ಇದರಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ಕುತಂತ್ರವೂ ಅಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ,ಕುಮಾರಸ್ವಾಮಿ  ಅವರು ಆಕ್ರೋಶ ವ್ಯಕ್ತಪಡಿಸಿದರು.

ಖಾಸಗಿ ಕಾರ್ಯಕ್ರಮದ ನಿಮಿತ್ತ ಹಾಸನಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮಗಳ ಮಾತನಾಡಿ ಮಾಜಿ ಮುಖ್ಯಮಂತ್ರಿಗಳು; ‘ಸಣ್ಣ ಪ್ರಮಾಣದಲ್ಲಿದ್ದ ಹಿಜಾಬ್ ವಿವಾದವನ್ನು ದೊಡ್ಡದು ಮಾಡಿದ್ದಾರೆ. ಇದರಲ್ಲಿ ಎಲ್ಲಾ ಸಮಾಜದ ಸಂಘಟನೆಗಳ ಪಾತ್ರವೂ ಇದೆ. ಇದು ವ್ಯವಸ್ಥಿತವಾಗಿ ಶುರುವಾಗಿದ್ದು, ಇದರ ಹಿಂದೆ ರಾಷ್ಟ್ರೀಯ ಪಕ್ಷಗಳ ಕುತಂತ್ರವೂ ಇದೆ. ಅದಕ್ಕೆ ಈ ವಿಷಯವನ್ನು ದೇಶವ್ಯಾಪಿ ಹರಡುವಂತೆ ಮಾಡಲಾಗುತ್ತಿದೆ. ಹಾಗಾಗಿ ಜನ ಇಂಥ ಭಾವನಾತ್ಮಕ ವಿಷಯಗಳಿಗೆ ಬಲಿಯಾಗಬಾರದು’ ಎಂದರು.

ನಮಗೆಲ್ಲರಿಗೂ ಬೇಕಿರುವುದು ಬದುಕು ಮಾತ್ರ. ಬದುಕು ಕಟ್ಟುವ ನಿಟ್ಟಿನಲ್ಲಿ ಸರಕಾರ ಕೆಲಸ ಮಾಡಬೇಕು. ಸಮಾಜದಲ್ಲಿ ಅಶಾಂತಿ ಉಂಟು ಮಾಡುವ, ಸಮಾಜವನ್ನು ಹಾಳು ಮಾಡುವ ಕೆಲಸ ಆಗಬಾರದು ಎಂದು ಅವರು ಪ್ರತಿಪಾದಿಸಿದರು.

ರಾಜ್ಯದಲ್ಲಿ ಹಿಜಾಬ್ ವಿವಾದ ಯಾಕೆ ಪ್ರಾರಂಭವಾಯಿತು? ಇದರ ಹಿಂದಿನ ದುರುದ್ದೇಶವೇನು? ಶಿಕ್ಷಣ ಕ್ಷೇತ್ರಕ್ಕೂ ಇದನ್ನು ಯಾಕೆ ತಂದರು? ಮಕ್ಕಳ ಹೃದಯ ಹಾಳು ಮಾಡಲು ಈ ರೀತಿ ಮಾಡಬೇಕಿತ್ತಾ? ಯಾವುದೋ ಒಂದು ಶಾಲೆಯಲ್ಲಿ ಆರಂಭವಾದ ವಿವಾದವನ್ನು ಅಲ್ಲಿಯೇ ಮುಗಿಸಬೇಕಿತ್ತು. ಆದರೆ ಅದನ್ನು ಅಲ್ಲಿಗೇ ಬಿಡುವುದು ಕೆಲವರಿಗೆ ಬೇಕಿರಲಿಲ್ಲ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಹಿಜಾಬ್ ವಿವಾದ ದೊಡ್ಡ ಮಟ್ಟದಲ್ಲಿ ಹರಡಿದರೆ ಇದರ ಮೆಲೆ ಭಾವನಾತ್ಮಕ ವಿಚಾರ ಇಟ್ಟು ಮತಗಳನ್ನಾಗಿ ಪರಿವರ್ತನೆ ಮಾಡಬಹುದು ಎನ್ನುವ ದುರಾಲೋಚನೆ ಇದರ ಹಿಂದೆ ಅಡಗಿದೆ. ಅದಕ್ಕಾಗಿ ಎಲ್ಲಾ ದುಷ್ಟ ಪ್ರಯತ್ನಗಳು ನಡೆಯುತ್ತಿವೆ. ಆದರೆ ಯಾವ ಕ್ಷಣದಲ್ಲಿ ಇದು ಯಾರಿಗೆ ತಿರಗುಬಾಣ ಆಗುತ್ತದೆ ಎನ್ನುವುದನ್ನು ನೋಡೊಣ ಎಂದು ಅವರು ಮಾರ್ಮಿಕವಾಗಿ ಹೇಳಿದರು.

ಪೋಷಕರು ಎಚ್ಚರ ವಹಿಸಬೇಕು. ನಿಮ್ಮ ಮಕ್ಕಳನ್ನು ದುರುಪಯೋಗ ಮಾಡಿಕೊಳ್ಳುವ ಯಾವುದೇ ಸಂಘಟನೆ ಇರಲಿ, ಅಂಥವರಿಗೆ ಅವಕಾಶ ಕೊಡಬೇಡಿ. ನಿಮ್ಮ ಮಕ್ಕಳನ್ನು ಅಂತಿಮವಾಗಿ ದಾರಿ ತಪ್ಪಿಸುತ್ತಿದ್ದಾರೆ. ಆ ಮಕ್ಕಳ ಭವಿಷ್ಯ ಹಾಳು ಮಾಡುತ್ತಿದ್ದಾರೆ. ನೈಜ ವಾತಾವರಣ ಏನಿದೆ ಎಂಬ ಬಗ್ಗೆ ಮಕ್ಕಳಿಗೆ ಬುದ್ದಿ ಹೇಳಿ. ಚಿಕ್ಕ ಮಕ್ಕಳಲ್ಲಿ ದ್ವೇಷದ ಮನೋಭಾವನೆ ಬೆಳೆಸುವಂಥ ಕೆಲಸ ಬೇಡ. ಸಮಾಜವನ್ನು ದಾರಿ ತಪ್ಪಿಸುವಂತಹ ಸಂಘಟನೆಗಳಿಗೆ ಯಾರೂ ಬಲಿಯಾಗುವುದು ಬೇಡ ಎಂದು ಅವರು ಕಿವಿಮಾತು ಹೇಳಿದರು.

ಈ ವಿವಾದವನ್ನು ಆರಂಭದಲ್ಲಿಯೇ ಮೊಟಕುಗೊಳಿಸಬಹುದಿತ್ತು. ಯಾರೂ ಅಭಿವೃದ್ಧಿ ವಿಚಾರಗಳನ್ನು ಚರ್ಚೆ ಮಾಡದೇ ರಾಜಕೀಯ ಮಾಡುತ್ತಿದ್ದಾರೆ. ಕೇಂದ್ರದಲ್ಲಾಗಲಿ ಅಥವಾ ರಾಜ್ಯದಲ್ಲಾಗಲಿ ಸರಕಾರಗಳಯ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ. ಉತ್ತರ ಪ್ರದೇಶದ ಚುನಾವಣೆಯಲ್ಲಿ ಅಭಿವೃದ್ಧಿಪೂರಕ ವಿಚಾರ ಚರ್ಚೆ ಮಾಡಲು ಇವರ ಬಳಿ ವಿಚಾರಗಳೇ ಇಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು