News Karnataka Kannada
Sunday, April 28 2024
ಹಾಸನ

ಹೆಚ್.ಡಿ.ಕೆ ಹಿರಿಯ ನಾಯಕರ ವಿರುದ್ದ ಆತುರದ ಹೇಳಿಕೆ ಸಲ್ಲ : ಅರುಣ್ ಸಿಂಗ್

Arun Singh Main Newsk 1834158505
Photo Credit :
ಹಾಸನ: ಹೆಚ್.ಡಿ.ಕುಮಾರಸ್ವಾಮಿಯವರು, ಅರುಣ್ ಸಿಂಗ್ ಅವರು ರಾಜ್ಯದಲ್ಲಿ ಬಿಜೆಪಿ ಕಟ್ಟಲು ಬಂದಿಲ್ಲ. ಹಣ ವಸೂಲಿ ಮಾಡಿಕೊಂಡು ಹೋಗುವ ಏಜೆಂಟ್ ಆಗಿ ಬಂದಿದ್ದಾರೆಂದು ಹೇಳಿಕೆ ನೀಡಿದ  ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಹಿರಿಯ ನಾಯಕರ ವಿರುದ್ದ ಆತುರದ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಹೇಳಿದ್ದಾರೆ.
ಪಟ್ಟಣದಲ್ಲಿ ಬುಧವಾರ ನಡೆದ ಮಂಡ್ಯ ಮತ್ತು ಹಾಸನ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಭೆ ಹಾಗೂ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.
ಹಿರಿಯರಾದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರ ಬಗ್ಗೆ ನನಗೆ ಗೌರವವಿದೆ. ಅವರ ಮಗ  ಇತರರಿಗೆ ಗೌರವ ಕೊಡುವುದನ್ನು, ಯಾವ ರೀತಿ ಮಾತನಾಡಬೇಕೆಂಬುದನ್ನು ತಂದೆಯನ್ನು ನೋಡಿ ಕಲಿಯಲಿ ಎಂದು ತಿರುಗೇಟು ನೀಡಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು