News Karnataka Kannada
Friday, May 03 2024
ಹಾಸನ

ಬಿಜೆಪಿ ಸಂಪರ್ಕದಲ್ಲಿದ್ದಾರೆ ಕಾಂಗ್ರೆಸ್​ನ 45 ಶಾಸಕರು: ಬಾಂಬ್‌ ಸಿಡಿಸಿದ ಕುಮಾರಸ್ವಾಮಿ

45 Congress MLAs in touch with BJP: Kumaraswamy
Photo Credit : News Kannada

ಹಾಸನ: ಭರವಸೆಗಳ ಮೇಲೆ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಮೇಲೆ ಆಡಳಿತ ಪಕ್ಷದ ಶಾಸಕರಿಗೆ ಭರವಸೆ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ ಎಂದರೆ ತಪ್ಪಾಗಲಾರದು. ಅದಕ್ಕೆ ತಕ್ಕಂತೆ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌ ಡಿ ಕುಮಾರಸ್ವಾಮಿ ಹೇಳಿಕೆಯೊಂದನ್ನು ನೀಡಿದ್ದಾರೆ.

ಗುಪ್ತಚರ ಮಾಹಿತಿ ಪ್ರಕಾರ ಬಿಜೆಪಿ ಜೊತೆ ಕಾಂಗ್ರೆಸ್​ನ 45 ಶಾಸಕರು ಸಂಪರ್ಕದಲ್ಲಿದ್ದಾರೆ. ಅದನ್ನು ತಡೆಯಲು ಸಿಎಂ, ಡಿಸಿಎಂ ಮುಂದಾಗಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​. ಡಿ.ಕುಮಾರಸ್ವಾಮಿ ಹೇಳಿದರು.

ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ವಿಪಕ್ಷದ 40 ರಿಂದ 50 ಶಾಸಕರು ಮತ್ತು ಮುಖಂಡರನ್ನು ಪಕ್ಷಕ್ಕೆ ಕರೆತನ್ನಿ ಅಂತ ಬ್ರೇಕ್​ಫಾಸ್ಟ್ ಸಭೆಯಲ್ಲಿ ರಾಜ್ಯ ಕಾಂಗ್ರೆಸ್​ ನಾಯಕರಿಗೆ ಹೈಕಮಾಂಡ್​ ಸೂಚನೆ ನೀಡಿದೆ ಎಂಬ ಮಾಹಿತಿ ದೊರೆತಿದೆ. 136 ಸ್ಥಾನ ಇದ್ದರೂ ಆಪರೇಷನ್ ಮಾಡಲು ಹೊರಟಿದ್ದೀರಿ. ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಸತ್ತು ಬಿದ್ದಿದೆ ಅದನ್ನು ಮೊದಲು ನೋಡಿಕೊಳ್ಳಿ. ಅದು ಬಿಟ್ಟು ಅವರು ಬರುತ್ತಾರೆ, ಇವರು ಬರುತ್ತಾರೆ ಅಂತ ಏಕೆ ಹೇಳುತ್ತೀರಾ? ಎಂದು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ಮಾಡಿದರು.

ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಾನು ದುಬೈನಲ್ಲಿದ್ದಾಗ 5 ರಿಂದ 8 ಜನ ಪಕ್ಷ ಬಿಟ್ಟು ಹೋಗುತ್ತಾರೆ ಎಂಬ ಗೊಂದಲ ಸೃಷ್ಟಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ (ನ.08) ಸಭೆ ಕರೆದಿದ್ದೆ.​ ಸಭೆಯಲ್ಲಿ 19 ಶಾಸಕರ ಪೈಕಿ 18 ಶಾಸಕರು ಭಾಗಿಯಾಗಿದ್ದರು. ಶಾಸಕ ಶರಣಗೌಡ ಕಂದಕೂರ್​ ಭಾಗಿಯಾಗಿರಲಿಲ್ಲ. ಕಂದಕೂರ್​ ನಮ್ಮ ಮನೆಯ ಮಗ, ಅವರಲ್ಲಿ ಸ್ವಲ್ಪ ಗೊಂದಲ ಇದೆ. ಶರಣಗೌಡ ಕಂದಕೂರ್ ಅವರನ್ನು ಕರೆದು ಮಾತನಾಡುತ್ತೇನೆ. ಶಾಸಕರು ಪಕ್ಷ ಬಿಟ್ಟು ಹೋಗುತ್ತಾರೆಂದು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ನಮ್ಮ ಶಾಸಕರ ಮೇಲೆ ಯಾವುದೇ ಅನುಮಾನವಿಲ್ಲ. ಕಾಂಗ್ರೆಸ್​ ಆಮಿಷಕ್ಕೆ ಒಳಗಾಗಿ ಯಾವ ಶಾಸಕರು ಪಕ್ಷ ಬಿಡುವುದಿಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು