ಹಾಸನ: ಯಾವುದೇ ಫಲಾ ಪೇಕ್ಷೆ ಇಲ್ಲದೆ ಬಿಜೆಪಿ ಸೇರ್ಪಡೆಗೊಂಡಿದ್ದೇನೆ ಆದರೆ ವಿಧಾನಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ನನಗೆ ಅನ್ಯಾಯವಾಗಿದೆ ಎಂಬ ಆಪಾದನೆ ಸತ್ಯಕ್ಕೆ ದೂರವಾಗಿದೆ ಎಂದು ಮಾಜಿ ಶಾಸಕ ಎ ಟಿ ರಾಮಸ್ವಾಮಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ಸೇರ್ಪಡೆ ನಂತರ ದೆಹಲಿ , ಬೆಂಗಳೂರು ಹಾಗೂ ಹಾಸನದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟ ನಿಲುವನ್ನು ಕ್ಷೇತ್ರದ ಮತದಾರರಿಗೆ ಹಾಗೂ ನನ್ನ ಕಾರ್ಯಕರ್ತರಿಗೆ ತಿಳಿಸಿದ್ದೇನೆ.
ಆದರೂ ಸಹ ಕೆಲ ಕಿಡಿ ಗೇಡಿಗಳು ವಿಧಾನಸಭೆ ಚುನಾವಣೆ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಎ ಟಿ ರಾಮಸ್ವಾಮಿಯವರಿಗೆ ಅನ್ಯಾ ಯವಾಗಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಯಾರು ಸಹ ಕಿವಿಗೊಡಬಾರದು ಎಂದು ವಿನಂತಿಸಿದರು.
ಬಿಜೆಪಿ ಸೇರುವ ವೇಳೆ ಬಿ.ಎಸ್ ಯಡಿಯೂರಪ್ಪ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಸಿ.ಟಿ ರವಿ , ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ನಾಯಕರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಡ ಹೇರಿದ್ದರು. ಆದರೆ ಯಾವುದೇ ಫಲಾಪೇಕ್ಷೆ ಇಲ್ಲದೆ ನಾನು ಪಕ್ಷವನ್ನು ಸೇರಿದ್ದೇನೆ.
ಮುಂದಿನ ದಿನಗಳಲ್ಲಿ ರಾಜಕೀ ಯದಿಂದ ತಟಸ್ಥವಾಗಬೇಕು ಎಂದು ಸಹ ನಿರ್ಧಾರ ಮಾಡಿದ್ದೆ ಆದರೆ ಕ್ಷೇತ್ರದ ಜನರಿಗೆ ಹಾಗೂ ಕಾರ್ಯಕರ್ತರಿಗೆ ಧ್ವನಿಯಾಗಿರುವ ನಿಟ್ಟಿನಲ್ಲಿ ಬಿಜೆಪಿ ಪಕ್ಷವನ್ನು ವೇದಿಕೆಯಾಗಿ ಬಳಸಿಕೊಂಡಿದ್ದೇನೆ ಎಂದರು. ಇಂದಿನ ರಾಜಕೀಯ ಕ್ಷೇತ್ರದಲ್ಲಿ ಮೌಲ್ಯಧಾರಿತ ವ್ಯಕ್ತಿಗಳಿಗೆ ಮನ್ನಣೆಯ ದೊರೆಯುತ್ತಿಲ್ಲ, ಸತ್ಯ, ನ್ಯಾಯ, ಧರ್ಮ ಬಹಳ ದೂರದ ಮಾತಾಗಿದ್ದು, ರಾಜಕೀಯ ವ್ಯಾಪಾ ರಿಕರಣವಾಗುತ್ತಿರುವುದು ದೂರದೃ ಷ್ಟಕರ ಎಂದು ರಾಮಸ್ವಾಮಿ ವಿಷಾದ ವ್ಯಕ್ತಪಡಿಸಿದರು.
ಚುನಾವಣೆ ಪಾರದರ್ಶಕತೆ ಹಾಗೂ ನ್ಯಾಯ ಸಮ್ಮತವಾಗಿ ನಡೆಯಬೇಕಾದರೆ ಚುನಾವಣೆ ಪದ್ಧತಿಯಲ್ಲಿ ಸುಧಾರಣೆ ಆಗಬೇಕಿದೆ ಎಂದು ಕೇಂದ್ರದ ಬಿಜೆಪಿ ನಾಯಕರಿಗೂ ತಿಳಿಸಿದ್ದೇನೆ ರಾಜಕೀಯ ಇಂದು ವ್ಯಾಪಾರವಾಗಿದ್ದು ಸ್ಪರ್ಧೆ ಮಾಡುವವರು ೫೦ ರಿಂದ ೬೦ ಕೋಟಿ ಬಂಡವಾಳ ಹೂಡುತ್ತಾರೆ ಹಾಗೂ ಬಂಡವಾಳವನ್ನು ವಾಪಸ್ಸು ಪಡೆಯಲು ಪ್ರಯತ್ನಿಸುತ್ತಾರೆ. ಇದರಿಂದ ಯೋಗ್ಯರು ರಾಜಕೀಯ ಕ್ಷೇತ್ರಕ್ಕೆ ಬರುವುದು ಕಷ್ಟಕರವಾಗಿದೆ ಎಂದು ಹೇಳಿದರು.
ಚುನಾವಣೆಯ ಸಂದರ್ಭದಲ್ಲಿ ಕ್ಯಾಶ್ ಮತ್ತು ಕ್ಯಾಸ್ಟ್ ಹೆಚ್ಚು ಅವಶ್ಯಕತೆಯಾಗಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಗೆ ತಕ್ಕಂತೆ ಚುನಾವಣೆ ನಡೆಯಬೇಕು ಎಂಬುದು ನನ್ನ ಆಶಯವಾಗಿದೆ ಎಂದರು.