ಆಲೂರು: ಮಾಜಿ ಪ್ರಧಾನಿ ದೇವೇಗೌಡರ ಹುಟ್ಟು ಹಬ್ಬಕ್ಕೆ ಜಿಲ್ಲೆಯಲ್ಲಿ ಜೆ.ಡಿ.ಎಸ್ ಪಕ್ಷ ೭ ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಅವರಿಗೆ ಕೊಡುಗೆ ನೀಡಬೇಕು ಎಂದು ಭವಾನಿ ರೇವಣ್ಣ ತಿಳಿಸಿದರು.
ಆಲೂರು ಪಟ್ಟಣದಲ್ಲಿ ಆಯೋಜಿಸಿದ್ದ ರೋಡ್ ಶೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಇವರು ಜೆ.ಡಿ.ಎಸ್ ತಾಲ್ಲೂಕು ಕಚೇರಿ ಆವರಣದಿಂದ ಕೆ.ಇ.ಬಿ ವರೆಗೆ ಹಾಗೂ ಕೆ.ಇ.ಬಿ ಯಿಂದ ಕೊನೆಪೇಟೆಯವರೆಗೆ ರೋಡ್ ಶೋ ಮೂಲಕ ಶಾಸಕ ಹೆಚ್.ಕೆ ಕುಮಾರಸ್ವಾಮಿಯವರ ಪರ ಮತಯಾಚನೆ ಮಾಡಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಅಗತ್ಯ ವಸ್ತುಗಳ ಬೆಲೆ ಹಾಗೂ ದಿನಸಿ ಪದಾರ್ಥಗಳ ಬೆಲೆ ಹೆಚ್ಚಿರು ವುದರಿಂದ ಜನಸಾಮಾನ್ಯರು ಕೊಳ್ಳಲು ಪರದಾಡುವಂತಾಗಿದೆ. ನಮ್ಮ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಈಗಾಗಲೇ ಮಾಜಿ ಮುಖ್ಯಮಂತ್ರಿ ಕುಮಾರಣ್ಣ ತಿಳಿಸಿರುವಂತೆ ಪಂಚರತ್ನ ಯೋಜನೆಗಳಲ್ಲಿ ರಾಜ್ಯದಲ್ಲಿ ಜಾರಿಗೊಳಿಸುವುದರ ಮೂಲಕ ರೈತರಿಗೆ, ವೃದ್ಧರಿಗೆ ಪಿಂಚಣಿ, ಜನಸಾಮಾನ್ಯರಿಗೆ ೫ ಸಿಲಿಂಡರ್ ಗಳನ್ನು ಉಚಿತವಾಗಿ ನೀಡಲಾಗುವುದು. ಹಾಸನ ಜಿಲ್ಲೆಯಲ್ಲಿ ೭ ಕ್ಷೇತ್ರಗಳಲ್ಲೂ ಅತ್ಯಧಿಕ ಮತಗಳಿಂದ ನಮ್ಮ ಪಕ್ಷ ಗೆಲುವು ಸಾಧಿಸುವುದು ನಿಶ್ಚಿತ ಎಂದು ತಿಳಿಸಿದರು.
ಶಾಸಕ ಹೆಚ್. ಕೆ ಕುಮಾರ ಸ್ವಾಮಿ ಮಾತನಾಡಿ, ದೇಶದಲ್ಲಿ ನಿರುದ್ಯೋಗ ಹೆಚ್ಚಳ, ರಸ ಗೊಬ್ಬರಗಳ ಬೆಲೆ ಏರಿಕೆ, ಭ್ರಷ್ಟಾಚಾರಗಳಿಂದ ಕೂಡಿರುವ ಬಿ.ಜೆ.ಪಿ ಪಕ್ಷವನ್ನು ಜನರು ಬೆಂಬಲಿಸುತ್ತಾರೋ, ರೈತರ ಬೆನ್ನೆಲುಬಾಗಿ, ರೈತರ ಸಾಲ ಮನ್ನಾ, ಪ್ರತಿ ಎಕರೆಗೆ ೧೦ ರೂ. ಪ್ರೋತ್ಸಾಹ ಧನ, ೫೦೦೦ರೂ. ವೃದ್ಧಾಪ್ಯ ವೇತನ ಎಲ್ಲಾ ವರ್ಗದವರಿಗೆ ೫ ಸಿಲಿಂಡರ್ ಉಚಿತ ಮುಂತಾದ ಕಾರ್ಯ ಕ್ರಮಗಳನ್ನು ಆಯೋಜಿಸುತ್ತಿರುವ ಜೆ.ಡಿ.ಎಸ್ ಪಕ್ಷವನ್ನು ಬೆಂಬಲಿಸುತ್ತಾರೋ ಎಂಬುದು ಚುನಾವಣಾ ಫಲಿತಾಂಶದ ನಂತರ ಹೊರಬೀಳಲಿದೆ, ಎಲ್ಲಾ ಜಾತಿ ಧರ್ಮ ವರ್ಗದವರಿಗೆ ಸಾಮಾಜಿಕ ಸಮಾನತೆಯನ್ನು ನೀಡಿದ ಪಕ್ಷ ಜೆ.ಡಿ.ಎಸ್ ಪಕ್ಷ ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಹೆಚ್. ಬಿ ಧರ್ಮರಾಜ್, ದೇವೇಂದ್ರ, ಆಶಾ ಮುಂತಾದವರು ಬಿ.ಜೆ.ಪಿ ಪಕ್ಷವನ್ನು ತೊರೆದು ಜೆ.ಡಿ.ಎಸ್ ಪಕ್ಷವನ್ನು ಸೇರಿದರು.
ತಾಲ್ಲೂಕು ಜೆ.ಡಿ.ಎಸ್ ಅಧ್ಯಕ್ಷ ಕೆ.ಎಸ್ ಮಂಜೇಗೌಡ, ಯೊಗೇಶ್, ಮಲ್ಲಿಕಾರ್ಜುನ್, ಗೌಡಪ್ಪ, ಮಂಜೇಗೌಡ, ಗೋಪಿನಾಥ್, ದೊರೆಸ್ವಾಮಿ, ವೀರಭದ್ರಸ್ವಾಮಿ, ಪಾಣಿ, ಹಾಗೂ ಜೆ.ಡಿ.ಎಸ್ ಕಾರ್ಯ ಕರ್ತರು ಉಪಸ್ಥಿತರಿದ್ದರು.
ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್ ನೀಡುತ್ತೇವೆ…
ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…
ದೊಡ್ಮನೆ ಕುಡಿ ಯುವರಾಜ್ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.
ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್ ಕುಮಾರ್ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…