ಆಲೂರು: ಕಷ್ಟಪಟ್ಟು ಬೆಳೆದಿದ್ದ ಮುಸುಕಿನ ಜೋಳ ಅಪಾರ ಲಾಭ ತಂದುಕೊಡುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ರೈತನಿಗೆ ಆಘಾತ ಎದುರಾಗಿದ್ದು, ಲಕ್ಷಾಂತರ ಮೌಲ್ಯದ ನೂರಾರು ಕ್ವಿಂಟಾಲ್ ಜೋಳವನ್ನು ದುಷ್ಕರ್ಮಿಗಳು ಶುಕ್ರವಾರ ರಾತ್ರಿ ಸುಟ್ಟು ಹಾಕಿದ್ದಾರೆ.
ತಾಲೂಕಿನ ಅಂಜಳ್ಳಿ ಗ್ರಾಮದ ಯೋಗೇಶ್ ಎಂಬ ರೈತನ ಜೋಳದ ರಾಶಿ ಬೆಂಕಿಗಾಹುತಿಯಾಗಿದ್ದು ಆತನ ರೋದನೆ ಮುಗಿಲು ಮುಟ್ಟಿದೆ. ಊರಿನಲ್ಲಿ ಯಾರಿಗೂ ಕೇಡು ಬಯಸದ ತಾನಾಯಿತು ತಮ್ಮ ಕೆಲಸವಾಯಿತು ಎಂಬಂತಿರುವ ರೈತನ ಬೆಳೆಯನ್ನು ಸುಟ್ಟು ಹಾಕಲು ಕಾರಣವೇನೆಂಬುದು ತಿಳಿದುಬಂದಿಲ್ಲ.
ಸಮೃದ್ಧವಾಗಿ ಬೆಳೆದ ಜೋಳವನ್ನ ಮನೆಯ ಪಕ್ಕ ಕಣ ಮಾಡಿ ರಾಶಿ ಹಾಕಿದ್ದರು.ಯಾರೋ ಕಿಡಿಗೇಡಿಗಳು ಇದೀಗ ರಾಶಗೆ ಬೆಂಕಿ ಹಾಕದ್ದಾರೆ. ಬೆಂಕಿ ಕಾಣಿಸಿಕೊಂಡಾಗ ಸ್ಥಳೀಯರು ಮಾಹಿತಿ ನೀಡಿದ್ದು ಗ್ರಾಮಸ್ಥರೊಂದಿಗೆ ಬೆಂಕಿ ನಂದಿಸುವ ಪ್ರಯತ್ನ ಮಾಡಲಾಯಿತಾದರೂ ಅಷ್ಟರಲ್ಲಿ ಬಹುತೇಕ ಸುಟ್ಟು ಕರಕಲಾಗಿತ್ತು.
ರಾಶಿಗೆ ಏಕಾಏಕಿ ಬೆಂಕಿ ಆವರಿಸಿದ್ದರಿಂದ ಜೋಳ ಸಂಪೂರ್ಣ ನಾಶವಾಗಿದೆ ಎಂದು ಯೋಗೇಶ್ ನೋವು ತೋಡಿಕೊಂಡಿದ್ದಾರೆ.
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…
ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ ಮಕ್ಕಳ ಮೇಲೆ ಬೀದಿ ನಾಯಿಗಳ ಗ್ಯಾಂಗ್ ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…