ಆಲೂರು: ತಾಲೂಕಿನ ಹುಣಸೆ ಗ್ರಾಮದ ವೇದಾವತಿ ನ್ಯಾಯಬೆಲೆ ಅಂಗಡಿಯಲ್ಲಿ ಸುಮಾರು ೬೦೦ ಪಡಿತರ ಚೀಟಿಗಳಿದ್ದು ಪಡಿತರ ವಿತರಣೆ ಸರಿಯಾಗಿ ನಿರ್ವಹಣೆಯಾಗದೆ ಜನರು ಕಣ್ಣೀರಿಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಕಳೆದ ದಿನಗಳಿಂದಲೂ ಕೂಡ ವೇದಾವತಿ ನ್ಯಾಯಬೆಲೆ ಅಂಗಡಿಯಲ್ಲಿ ಜನರಿಗೆ ತೂಕದಲ್ಲಿ ಮೋಸ ಒಂದು ಪಡಿತರ ಚೀಟಿಗೆ ರೂ ೧೦ ಅಂತೆ ೬೦೦ ಪಡಿತರ ಚೀಟಿಗಳಿಗೆ ೬,೦೦೦ ರೂಗಳನ್ನು ಬಡವರಿಂದ ಪಡೆಯುತ್ತಿದ್ದಾರೆ ಹಾಗೂ ಸರಿಯಾದ ಸಮಯದಲ್ಲಿ ಹೆಬ್ಬೆಟ್ಟು ತೆಗೆದುಕೊಳ್ಳದೆ ಸಾರ್ವಜನಿಕಳನ್ನು, ಕೂಲಿ ಕಾರ್ಮಿಕರನ್ನು, ಸತಾಯಿಸ್ತಾ ಇದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕೂಡಲೇ ಆಹಾರ ನಿರೀಕ್ಷಕರು ಕ್ರಮ ಕೈಗೊಳ್ಳದೆ ಹೋದರೆ ಮುಂದಿನ ದಿನದಲ್ಲಿ ಉಗ್ರ ಹೋರಾಟವನ್ನು ಮಾಡುವುದಾಗಿ ಸುತ್ತಮುತ್ತಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಅಧಿಕಾರಿಗಳು ಶೀಘ್ರ ಸ್ಥಳಕ್ಕೆ ಭೇಟಿ ನೀಡಿ ಗ್ರಾಹಕರಿ ಆಗುತ್ತಿರುವ ತೊಂದರೆ ತಪ್ಪಿಸಬೇಕು ಎಂದು ಸಂಘಟನೆಯ ಮುಖಂಡರುಗಳು ಎಚ್ಚರಿಸಿದ್ದಾರೆ.
ಕಾರು ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್ ಮಾಡಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಬ್ಯಾಂಕ್ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.
ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…
ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…
ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…