News Karnataka Kannada
Wednesday, May 08 2024
ಹಾಸನ

ಆಲೂರು: ಜ.೧೪ರಂದು ದ್ವಿತೀಯ ಕೇಂದ್ರ ಕನ್ನಡ ಸಾಹಿತ್ಯ ಸಮ್ಮೇಳನ

Alur: Second Central Kannada Sahitya Sammelana to be held on Jan. 14
Photo Credit : News Kannada

ಆಲೂರು: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಆಲೂರು ತಾಲೂಕು ಘಟಕದ ವತಿಯಿಂದ’ ತಾಲೂಕು ದ್ವಿತೀಯ ಕೇಂದ್ರ ಕನ್ನಡ ಸಾಹಿತ್ಯ ಸಮ್ಮೇಳನ ’ ಜ ೧೪ ರ ಶನಿವಾರ ಡಾ ಬಿ ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆಯಲಿದೆ, ಕನ್ನಡ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ತಾಲೂಕು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಅಧ್ಯಕ್ಷ ಹೆಚ್ ಇ ದ್ಯಾವಪ್ಪ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಿನಾಂಕ ಜ ೧೪ ರ ಬೆಳಗ್ಗೆ ೧೦ ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗಲಿದೆ, ಕೇ ಕ ಸಾ ವೇದಿಕೆ ಉಪಾಧ್ಯಕ್ಷ ನಾಗರಾಜ ದೊಡ್ಡಮನಿ ಪ್ರಾಸ್ತಾವಿಕ ನುಡಿ, ಜಿಲ್ಲಾಧ್ಯಕ್ಷ ರಾದ ಗಂಗಮ್ಮ ನಂಜುಂಡಪ್ಪ ಆಶಯ ನುಡಿಗಳನಾಡುವರು.

ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್ ಉಪ್ಪಾರ್ ನೆರವೇರಿಸುವರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೆಚ್ ಕೆ ಕುಮಾರಸ್ವಾಮಿ ವಹಿಸಲಿದ್ದಾರೆ, ಹಿರಿಯ ಸಾಹಿತಿ ಎಂ ಶಿವಣ್ಣ, ಸಮ್ಮೇಳನದ ಸರ್ವಧ್ಯಕ್ಷರಾಗಿದ್ದು ಸಮ್ಮೇಳನ ಅಧ್ಯಕ್ಷರ ಭಾಷಣ ಮಾಡುವರು. ತಾಲೂಕು ಅಧ್ಯಕ್ಷ ಹೆಚ್ ಇ ದ್ಯಾವಪ್ಪ ಸ್ವಾಗತ ಭಾಷಣ ಮಾಡುವರು ಎಂದ ಅವರು ಕಾರ್ಯಕ್ರಮದಲ್ಲಿ ವಿಚಾರಗೋಷ್ಠಿ, ಕವಿಗೋಷ್ಠಿ, ಕಾವ್ಯ ವಾಚನ ಆಯೋಜಿಸಲಾಗಿದ್ದು, ಜಿಲ್ಲೆಯ ಎಲ್ಲಾ ಕವಿಗಳು ಭಾಗವಹಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಿ ಇ ಒ, ಎಂ ಡಿ ಕಾಂತರಾಜ್, ಜಿಲ್ಹಾ ಕ ಸಾ ಪ ಮಾಜಿ ಗೌರವಾಧ್ಯಕ್ಷ ರವಿ ನಾಕಲಗೂಡು, ಕೇ ಕ ಸಾ ವೇದಿಕೆ ರಾಜ್ಯಾಧ್ಯಕ್ಷೆ ಶಾಲಿನಿ ರುದ್ರಮುನಿ, ಗೌರವ ಸಲಹೆಗಾರ ನಾಗರಾಜ್ ಹೆತ್ತೂರು, ತಾಲೂಕು ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಕೆ ಎಸ್ ಮಂಜೇಗೌಡ, ತಹಸಿಲ್ದಾರ್ ಕೆ ಸಿ ಸೌಮ್ಯ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪೃಥ್ವಿ ರಾಮ್, ಹಿರಿಯ ಪತ್ರಕರ್ತ ಜೆ ಆರ್ ಕೆಂಚೇಗೌಡ, ಹಿರಿಯ ಸಾಹಿತಿಗಳಾದ ಪ್ರೊ. ಸೈಯದ್ ಶಹಬುದ್ದೀನ್, ಹಾಡ್ಲಹಳ್ಳಿ ನಾಗರಾಜು ಸೇರಿದಂತೆ ಸಾಹಿತ್ಯಾಸಕ್ತರು ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುವುದು ಎಂದ ಅವರು ಕಾರ್ಯಕ್ರಮಕ್ಕೆ ತಾಲೂಕಿನ ಸಾಹಿತ್ಯ ಸತ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಾಲೂಕು ದ್ವಿತೀಯ ಕೇಂದ್ರ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಅಧ್ಯಕ್ಷ ಹೆಚ್ ಇ ದ್ಯಾವಪ್ಪ, ಗೌರವಾಧ್ಯಕ್ಷ ಗುಲಾಂ ಸತ್ತಾರ್, ಸಂಚಾಲಕ ಕೃಷ್ಣೆಗೌಡ, ಗೌರವ ಸಲಹೆಗಾರರಾದ ಎಸ್ ಎಸ್ ಶಿವಮೂರ್ತಿ, ಎಂ ಬಾಲಕೃಷ್ಣ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು