News Karnataka Kannada
Saturday, April 27 2024
ಹಾಸನ

ಅರಸೀಕೆರೆ: ಶಶಿಧರ್ ಮನೆಗೆ ಕುಮಾರಸ್ವಾಮಿ ಭೇಟಿ, ಮಾತುಕತೆ

Arasikere: Kumaraswamy visits Shashidhar's house
Photo Credit : News Kannada

ಹಾಸನ: ೨೦೨೩ ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಜಿಲ್ಲೆಯಲ್ಲಿ ಕ್ಷೀಪ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು ಅರಸೀಕೆರೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಮುಖಂಡ ಶಶಿಧರ್ ಮನೆಗೆ ಭೇಟಿ ನೀಡುವುದು ಅಚ್ಚರಿಗೆ ಕಾರಣವಾಗಿದೆ.

ಅರಸೀಕೆರೆಯ ಕಾಂಗ್ರೆಸ್ ಮುಖಂಡ ಜೆ.ಪಿ ಶಶಿಧರ್ ಅವರು ಕಳೆದ ಅರಸೀಕೆರೆ ವಿಧಾನಸಭೆ ಚುನಾವಣೆಯಲ್ಲಿ ಪರಭವ ಗೊಂಡ ಅಭ್ಯರ್ಥಿ ಯಾಗಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಕೆ.ಎಂ ಶಿವಲಿಂಗೇಗೌಡ ವಿರುದ್ಧ ೫೦,೦೦೦ಕ್ಕೂ ಹೆಚ್ಚು ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದಿದ್ದರು.

ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ನಿರ್ಣಾಯಕ ಮತಗಳಿರುವ ಲಿಂಗಾಯಿತ ಸಮುದಾಯದ ಪ್ರಭಾವಿ ನಾಯಕ ರಾಗಿರುವ ಶಶಿಧರವರು ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು ಈ ಭೇಟಿ ಅಚ್ಚರಿಯ ಬೆಳವಣಿಗೆಯಾಗಿದೆ . ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಹಾಲಿ ಶಾಸಕ ಕೆ.ಎಂ ಶಿವಲಿಂಗೇಗೌಡ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ನೀಡುತ್ತಿರುವ ಬೆನ್ನಲ್ಲೇ ಶಶಿಧರ ಅವರ ಭೇಟಿ ಹೆಚ್ಚು ಮಹತ್ವ ಪಡೆದುಕೊಂಡಿದೆ.

ಈಗಾಗಲೇ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಶಿವಲಿಂಗೇಗೌಡ ಅವರು ಕಾಂಗ್ರೆಸ್ ಪಕ್ಷದ ಪರವಾಗಿ ಮತಯಾಚನೆ ಮಾಡುತ್ತಿದ್ದು ಈಗಾಗಲೇ ಒಂದು ಸುತ್ತು ಕಾಂಗ್ರೆಸ್ ರಾಜ್ಯ ನಾಯಕರು ಸಹ ಭೇಟಿ ನೀಡಿ ಶಿವಲಿಂಗೇಗೌಡರ ಪರ ಪ್ರಚಾರ ಮಾಡಿದ್ದಾರೆ.

ಜೆಡಿಎಸ್ ಪಕ್ಷದಿಂದ ಬಾಣಾವರ ಅಶೋಕ್ ಅವರು ಕಣಕ್ಕಿಳಿಯಲಿದ್ದು ಶಶಿಧರ್ ಮನೆಗೆ ಬಾಣಾವರ ಅಶೋಕ್ ಸೇರಿದಂತೆ ಜೆಡಿಎಸ್ ನ ಪ್ರಮುಖ ಮುಖಂಡರು ಭೇಟಿ ವೇಳೆ ಕಾಣಿಸಿಕೊಂ ಡಿದ್ದು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಾಣಾವರ ಅಶೋಕ ಅವರಿಗೆ ಬೆಂಬಲಿಸುವಂತೆ ಹಾಗೂ ಜೆಡಿಎಸ್ ಗೆಲುವಿಗೆ ಸಹಕಾರ ನೀಡುವಂತೆ ಶಶಿಧರ್ ಅವರಲ್ಲಿ ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ ಎಂದು ಹೇಳಲಾಗಿದೆ.

ಬಾಣಾವರ ಅಶೋಕ್ ಅವರಿಗೆ ಬೆಂಬಲ ಹಾಗೂ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಬಗ್ಗೆ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ಶಶಿಧರ್ ಅವರು ಕುಮಾರಸ್ವಾಮಿ ಅವರಲ್ಲಿ ಕೆಲ ದಿನಗಳ ಕಾಲಾವಕಾಶ ಕೇಳಿದ್ದು ನಂತರ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು