ಅರಸೀಕೆರೆ: ಭರವಸೆ ನೀಡು ವುದರಿಂದ ಅಭಿವೃದ್ಧಿಯಾಗುವು ದಿಲ್ಲ ಕೊಟ್ಟ ಮಾತಿನಂತೆ ನಡೆದು ಕೊಂಡಾಗ ಮಾತ್ರ ಅಭಿವೃಧಿ ಎಂಬ ಬದ್ಧತೆಯನ್ನು ನನ್ನ ರಾಜ ಕೀಯ ಜೀವನದಲ್ಲಿ ಅಳವಡಿಸಿ ಕೊಂಡಿರುವುದರಿಂದ ಕಳೆದ ೧೫ ವರ್ಷಗಳಲ್ಲಿ ಕ್ಷೇತ್ರದ ಚಿತ್ರಣ ವೇ ಬದಲಾಗಿದೆ ಎಂದು ಶಾಸಕ ಕೆ. ಎಂ ಶಿವಲಿಂಗೇಗೌಡ ಹೇಳಿದರು.
ತಾಲೂಕಿನ ಹಾರನಹಳ್ಳಿ ಮೂಲಕ ಹಾದು ಹೋಗಿರುವ ಅರಸೀಕೆರೆ-ಹಾಸನ ರಾಜ್ಯ ಹೆದ್ದಾರಿ ಹಾರನಹಳ್ಳಿ ವ್ಯಾಪ್ತಿಯಲ್ಲಿ ರಸ್ತೆ ವಿಭಜಕ ಹಾಗೂ ವಿದ್ಯುತ್ ದೀಪಗಳ ಅಳವಡಿಕೆ ಕಾಮಗಾರಿ ಸೇರಿದಂತೆ ೭.೫೦ ಕೋಟಿ ರೂಪಾಯಿವೆಚ್ಚದಲ್ಲಿ ಹಾರನಹಳ್ಳಿ ಗ್ರಾ.ಪಂ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾ ಡಿದರು.
ನಗರ ಪ್ರದೇಶ ಹೆದ್ದಾರಿಗೆ ಹೊಂದಿಕೊಂಡ ಗ್ರಾಮಗಳು ಮಾತ್ರ ಅಭಿವೃದ್ಧಿ ಮಾಡದೆ ಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆದಿದೆ ಕುಡಿಯುವ ನೀರು,ರಸ್ತೆ, ಚರಂಡಿ, ತಮ್ಮ ಗ್ರಾಮಗಳಲ್ಲಿಯೇ ಗ್ರಾಮಸ್ಥರು ಸಣ್ಣ ಪುಟ್ಟ ಸಭೆ ಸಮಾರಂಭಗಳನ್ನ ಮಾಡಿಕೊ ಳ್ಳಲು ಅನುಕೂಲವಾಗುವ ರೀತಿಯಲ್ಲಿ ಸಮುದಾಯ ಭವನಗಳ ನಿರ್ಮಾಣ ಹೋಬಳಿ ಯವರು ನಿರ್ಮಾಣಗೊಂಡಿರುವ ವಸತಿ ಶಾಲೆಗಳು ಕ್ಷೇತ್ರದ ಅಭಿವೃದ್ಧಿ ಪಥವನ್ನು ತೋರುತ್ತಿದೆ ಎಂದರು.
ಗಿಜಿಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಧರ್ಮ ಶೇಖರ್ ಮಾತನಾಡಿ ಶಾಸಕರಾಗಿ ೧೫ ವರ್ಷಗಳಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳು ಆಗಿರುವುದರಿಂದ ಪಕ್ಷ ಮೀರಿದ ವ್ಯಕ್ತಿತ್ವವನ್ನು ಬೆಳೆಸಿಕೊಂಡಿರು ವುದಲ್ಲದೆ ಮಾದರಿ ರಾಜಕಾರಣಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಧರ್ಮೇಶ್ ಯಳವಾರೆ, ನಾಗರಾಜ್, ಮಹೇಶ್ ಸರೋಜಾ ಪ್ರಭು ಯಮುನಾ ಮತ್ತಿತರರು ಉಪಸ್ಥಿತರಿದ್ದರು.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.