News Karnataka Kannada
Thursday, May 02 2024
ಹಾಸನ

ಅರೇಹಳ್ಳಿ: ಕಾರು-ಬಸ್ ನಡುವೆ ಡಿಕ್ಕಿ ಪ್ರಾಣಾಪಾಯದಿಂದ ಕಾರು ಚಾಲಕ ಪಾರು

Uttar Pradesh: Three killed as truck rams into dhaba
Photo Credit : News Kannada

ಅರೇಹಳ್ಳಿ: ಬೇಲೂರು ತಾಲೂಕಿನ ಅರೇಹಳ್ಳಿಯ ಪಟ್ಟಣದ ಸಕಲೇಶಪುರ ರಸ್ತೆಯ ಚಚರ್? ಬಳಿಯ ಕೆಳ ತಿರುವಿನಲ್ಲಿ ಸರಕಾರಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಶುಕ್ರವಾರ ಸಂಭವಿಸಿದೆ.

ಸಕಲೇಶಪುರದಿಂದ ಬೇಲೂರು ಕಡೆಗೆ ಚಲಿಸುತ್ತಿದ್ದ ಕಾರು ಹಾಗೂ ಬೇಲೂರಿ ನಿಂದ ಸಕಲೇಶಪುರದ ಕಡೆಗೆ ಚಲಿಸುತ್ತಿದ್ದ ಬಸ್ ಅಪಘಾತ ಕ್ಕೀಡಾಗಿದ್ದು ಕಾರು ಚಾಲಕನ ಅತಿವೇಗ ಹಾಗೂ ಅಜಾಗೂರಕತೆಯೆ ಕಾರಣವೆಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಬಲಭಾಗ ಜಖಂಗೊಂಡಿದ್ದು ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕ ಸೀಟ್ ಬೆಲ್ಟ್ ಧರಿಸಿದ್ದರೂ ಏರ್ ಬ್ಯಾಗ್ ತೆರೆದಿಲ್ಲ. ಆದರೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ವಿಷಯ ತಿಳಿದ ಅರೇಹಳ್ಳಿ ಪೊಲೀಸ್ ಠಾಣಾಧಿಕಾರಿ ಸಿ.ಎಸ್ ಸುರೇಶ್ ಘಟನಾ ಸ್ಥಳಕ್ಕಾಗಮಿಸಿ ಪರಿಶೀಲಿಸಿದರು.ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು