ಅರೇಹಳ್ಳಿ: ಬೇಲೂರು ತಾಲೂಕಿನ ಅರೇಹಳ್ಳಿಯ ಪಟ್ಟಣದ ಸಕಲೇಶಪುರ ರಸ್ತೆಯ ಚಚರ್? ಬಳಿಯ ಕೆಳ ತಿರುವಿನಲ್ಲಿ ಸರಕಾರಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಶುಕ್ರವಾರ ಸಂಭವಿಸಿದೆ.
ಸಕಲೇಶಪುರದಿಂದ ಬೇಲೂರು ಕಡೆಗೆ ಚಲಿಸುತ್ತಿದ್ದ ಕಾರು ಹಾಗೂ ಬೇಲೂರಿ ನಿಂದ ಸಕಲೇಶಪುರದ ಕಡೆಗೆ ಚಲಿಸುತ್ತಿದ್ದ ಬಸ್ ಅಪಘಾತ ಕ್ಕೀಡಾಗಿದ್ದು ಕಾರು ಚಾಲಕನ ಅತಿವೇಗ ಹಾಗೂ ಅಜಾಗೂರಕತೆಯೆ ಕಾರಣವೆಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಬಲಭಾಗ ಜಖಂಗೊಂಡಿದ್ದು ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕ ಸೀಟ್ ಬೆಲ್ಟ್ ಧರಿಸಿದ್ದರೂ ಏರ್ ಬ್ಯಾಗ್ ತೆರೆದಿಲ್ಲ. ಆದರೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ವಿಷಯ ತಿಳಿದ ಅರೇಹಳ್ಳಿ ಪೊಲೀಸ್ ಠಾಣಾಧಿಕಾರಿ ಸಿ.ಎಸ್ ಸುರೇಶ್ ಘಟನಾ ಸ್ಥಳಕ್ಕಾಗಮಿಸಿ ಪರಿಶೀಲಿಸಿದರು.ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.