News Karnataka Kannada
Friday, May 10 2024
ಹಾಸನ

ಬೇಲೂರು: ಶಿಕ್ಷಣದಿಂದ ವಂಚಿತರಾಗದೆ ಭವಿಷ್ಯ ರೂಪಿಸಿಕೊಳ್ಳಲು ಕರೆ

Belur: Call to shape the future without being deprived of education
Photo Credit : News Kannada

ಬೇಲೂರು: ಸಮಾಜದಲ್ಲಿ ಯಾರೂ ಶಿಕ್ಷಣದಿಂದ ವಂಚಿತ ರಾಗದೆ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯೆಯೇ ಮಾನದಂಡವೆಂದು ಶಾಸಕ ಕೆ ಎಸ್ ಲಿಂಗೇಶ್ ಹೇಳಿದರು.

ನಗರದ ತಾಲ್ಲೂಕು ಪಂಚಾಯತಿ ಕಛೇರಿ ಬಳಿ ಇರುವ ಶಾಸಕರ ಭವನದಲ್ಲಿ ಏರ್ಪಡಿಸಿದ್ದ ಕಟ್ಟಡ ಹಾಗೂ ಇತರೆ ಕಾರ್ಮಿಕ ಮಕ್ಕಳಿಗೆ ಶಾಲಾ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕಿಟ್ ವಿತರಿಸಿ ನಂತರ ಮಾತನಾಡಿದ ಅವರು ಕರ್ನಾಟಕದ ಪ್ರತಿಯೊಬ್ಬ ಮಗುವಿಗೂ ಉತ್ತಮ ಹಾಗೂ ಗುಣಮಟ್ಟದ ಶಿಕ್ಷಣ ದೊರೆಯು ವಂತಾಗಬೇಕು, ಅದಕ್ಕೆ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಏಕ ರೂಪ ಶಿಕ್ಷಣ ಜಾರಿಗೆ ತಂದಿದ್ದು, ಅದರಲ್ಲಿ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಹಲವಾರು ರುಪುರೇಷಗಳನ್ನು ರೂಪಿಸಿದೆ, ಪ್ರಾಥಮಿಕ, ಮಾಧ್ಯಮ, ಪ್ರೌಢ ಶಿಕ್ಷಣ ಹಂತಾಗಳನ್ನಾಗಿ ರೂಪಿ ಸಿದ್ದು ಶಿಕ್ಷಣಕ್ಕೆ ಹೆಚ್ಚಿನ ಆಧ್ಯಾತೆ ಯನ್ನು ಪೋಷಕರು ನೀಡಬೇಕು, ಕೇವಲ ದುಡಿಮೆಗೆ ತಮ್ಮ ಜೀವ ನವನ್ನು ಇಟ್ಟರೆ ಸಾಲದು ತಮ್ಮ ಮಕ್ಕಳ ಭವಿಷ್ಯವನ್ನು ರೂಪಿಸುವ ಕೈಗಳು ಪೋಷಕರಾಗಬೇಕು.

ಇಂದು ಸುಮಾರು ೫ ಸಾವಿರ ಮೌಲ್ಯದ ೧೫೦ ಕಟ್ಟಡ ಹಾಗೂ ಇತರೆ ಕಾರ್ಮಿಕ ಮಕ್ಕಳಿಗೆ ಶಾಲಾ ಕಿಟ್ ಗಳನ್ನು ನೀಡಲಾಗುತ್ತಿದ್ದು ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಬೆಂಬಲಿಸಿ ಸಂಪೂರ್ಣ ಅಧಿಕಾರವನ್ನು ನೀಡಿ ಕುಮಾರ ಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಲು ಆಶೀರ್ವದಿಸಿದರೆ ರಾಜ್ಯದ ಎಲ್ಲಾ ಹೋಬಳಿಗಳಲ್ಲೂ ಪಬ್ಲಿಕ್ ಶಾಲೆಗಳನ್ನು ತೆರೆಯಲಿ ದ್ದೇವೆ, ರಾಜ್ಯದಲ್ಲಿ ಕಾರ್ಮಿಕ ಕಾಯ್ದೆ ಯನ್ನು ೧೯೯೬ ರಲ್ಲಿ ಮಾನ್ಯ ಹೆಚ್ ಡಿ ದೇವೇಗೌಡರು ಜಾರಿಗೆ ತಂದಿದ್ದರು, ಅದು ಇಂದು ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದೂ ಹೇಳಿದರು.

ಈ ಸಂದರ್ಭದಲ್ಲಿ ದಾಸೋ ಹ ನಿರ್ದೇಶಕ ಜಗದೀಶ್, ತಾಲ್ಲೂಕು ಪಂಚಾಯತ್ ಅಧಿಕಾರಿಗಳು ಕಾರ್ಮಿಕ ಇಲಾಖೆ ನೀರಿಕ್ಷಕ ಯೋಗೇಶ್, ಕಾರ್ಮಿಕ ವರ್ಗದವರು ಮಕ್ಕಳು ಇತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು