ಹಾಸನ

ಬೇಲೂರು: ಕಾಫಿ ಕಳ್ಳನ ಮೇಲೆ ಅಮಾನವೀಯ ಹಲ್ಲೆ, ಐವರ ಬಂಧನ

ಬೇಲೂರು: ಕಾಫಿ ಕದಿಯಲು ಬಂದು ಸಿಕ್ಕಿ ಬಿದ್ದ ಕಳ್ಳನಿಗೆ ಕೆಲವರು ಮನ ಬಂದಂತೆ ಥಳಿಸಿ ಅಮಾನವೀಯತೆ ಮೆರೆದಿರುವ ಘಟನೆ ತಾಲೂಕಿನ ಬೆಳ್ಳಾವರ ಗ್ರಾಮದಲ್ಲಿ ನಡೆದಿದೆ.

ಪಕ್ಕದ ಗ್ರಾಮದ ಮಂಜು ಎಂಬಾತ ಕಳೆದ ರಾತ್ರಿ ಕಾಫಿ ಕದಿಯಲು ಹೋಗಿದ್ದ ಎನ್ನಲಾಗಿದೆ. ಇದನ್ನು ಗಮನಿಸಿದ ತೋಟದ ಮಾಲಿಕ, ಇತರರ ಜೊತೆ ಸೇರಿ ಮಂಜುನನ್ನು ಹಿಡಿದು ಕೈಕಾಲು ಕಟ್ಟಿ ಮನಬಂದಂತೆ ಥಳಿಸಿದ್ದಾರೆ. ಅಷ್ಟೇ ಅಲ್ಲದೆ ರಾತ್ರಿ ಇಡೀ ಒಂದೇ ಕಡೆ ಬಿದ್ದು ನರಳುವಂತೆ ಮಾಡಿ ನಿರ್ದಯಿ ವರ್ತನೆ ತೋರಿದ್ದಾರೆ.

ಇಷ್ಟಕ್ಕೇ ಸುಮ್ಮನಾಗದ ಮಂದಿ, ಬೆಳಗ್ಗೆ ಕಾಲಿಗೆ ಹಗ್ಗ ಬಿಗಿದು ತೋಟದ ಬಳಿಯ ಮರಕ್ಕೆ ಕಟ್ಟಿ ಮತ್ತೊಮ್ಮೆ ತಲೆಯಲ್ಲಿ ರಕ್ತ ಸೋರುವ ರೀತಿ ಥಳಿಸಿದ್ದಾರೆ. ತಲೆ ಕೆಳಗಾಗಿ ಮರಕ್ಕೆ ಕಟ್ಟಿ ದುವ್ರರ್ತನೆ ಪ್ರದರ್ಶನ ಮಾಡಿದ್ದಾರೆ.

ಕಾಫಿ ಕದಿಯೋದು ಬೇಕಿತ್ತಾ ನಿನಗೆ, ಹೊಲಸು ತಿನ್ನುವ ಕೆಲಸ ಮಾಡಿದ್ದೀಯಾ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಳ್ಳಕ್ಕೆ ಬಿದ್ದರೆ ಆಳಿಗೊಂದು ಕಲ್ಲು ಅನ್ನೋ ಹಾಗೆ ದೊಣ್ಣೆ ಇತರೆ ವಸ್ತುಗಳಿಂದ ಥಳಿಸಿದ್ದಾರೆ. ಸಿಕ್ಕಿ ಬಿದ್ದ ಯುವಕ ನಿಮ್ಮ ದಮ್ಮಯ್ಯ ಹೊಡೀಬೇಡಿರಣ್ಣ, ಗೋಗರೆದರೂ ಬಿಡದೆ, ಕಳ್ಳತನ ಮಾಡುವಾಗ ಇದು ನಿನಗೆ ತಿಳಿದಿರಲಿಲ್ವಾ ಎಂದು ಹಂಗಿಸಿ ನಿಕೃಷ್ಟವಾಗಿ ನಡೆಸಿ ಕೊಂಡಿದ್ದಾರೆ.

ವಿಪರ್‍ಯಾಸ ಎಂದರೆ ತಾವು ಥಳಿಸುವ, ನಿಂದಿಸುವ ಎಲ್ಲವನ್ನೂ ವಿಡಿಯೋ ಮಾಡಿದ್ದಾರೆ. ಇದು ಎಲ್ಲೆಡೆ ವೈರಲ್ ಆಗಿದೆ. ತಪ್ಪು ಮಾಡಿದ ಯಾರನ್ನೇ ಆಗಲಿ ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಬೇಕು. ಆದರೆ ಕೆಲ ದುರುಳರು ತಾವೇ ಕಾನೂನು ಕೈಗೆ ತೆಗೆದುಕೊಂಡು ಮೃಗೀಯ ವರ್ತನೆ ತೋರಿದ್ದಾರೆ. ಈ ಹಿಂದೆಯೂ ಕಳ್ಳತನ ಮಾಡಿದ್ದೆ ಎಂದು ಸಿಟ್ಟಿಗೆದ್ದು ಮಂಜು ಮೇಲೆ ಅನೇಕರು ಮುಗಿ ಬಿದ್ದಿದ್ದಾರೆ.

ಇನ್ನೊಮ್ಮೆ ತಪ್ಪು ಮಾಡಲ್ಲ, ನನ್ನನ್ನು ಬಿಟ್ಟುಬಿಡಿ ಎಂದು ಕ್ಷಮೆ ಕೇಳಿದರೂ ಬಿಡದೆ ಮನಬಂದಂತೆ ಕೈ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಎಸ್ಪಿ ಹರಿರಾಮ್ ಶಂಕರ್, ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳಾವರ ಗ್ರಾಮದ ತೋಟವೊಂದರಲ್ಲಿ ಕಳ್ಳತನ ಮಾಡಿದ ಆರೋಪದಡಿ ಮಂಜು ಎಂಬಾತನನ್ನು ಥಳಿಸಲಾಗಿದೆ.

ನಾಲ್ಕೈದು ಮಂದಿ ಕಾಫಿ ಬೆಳೆಗಾರರು ಸೇರಿ ಈ ಕೃತ್ಯ ಎಸಗಿದ್ದಾರೆ. ನಮ್ಮ ಪೊಲೀಸರು ದಿಢೀರ್ ಕಾರ್ಯಪ್ರವೃತ್ತರಾಗಿ ಬೆಳ್ಳಾವರ ಗ್ರಾಮದ ರಾಘವೇಂದ್ರ ಕೆ.ಪಿ., ಉಮೇಶ, ಮಲ್ಲಿಗನೂರು ಗ್ರಾಮದ ಕೀರ್ತಿ, ದೋಣನಮನೆ ಗ್ರಾಮದ ಶ್ಯಾಮುಯಲ್ ಮತ್ತು ಕಿತ್ತಾವರ ಗ್ರಾಮದ ನವೀನ್ ರಾಜ್ ಎಂಬುವರನ್ನು ಬಂಧಿಸಿದ್ದಾರೆ ಎಂದು ಹೇಳಿದರು. ಹಲ್ಲೆ ಮಾಡಿದ ಎಲ್ಲಾ ಆರೋಪಿಗಳನ್ನು ಬಂಧಿಸಿದ್ದು ತನಿಖೆ ಮುಂದುವರಿದಿದೆ ಎಂದರು.

Gayathri SG

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

8 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

17 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

29 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

47 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

53 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

1 hour ago